ಅಮೇರಿಕಾದ ಬಾನಾ (ಬಂಟ್ಸ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ) 47ನೇ ವಾರ್ಷಿಕೋತ್ಸವದ 25ನೇ ಸಮ್ಮೇಳನ "ದಿಬ್ಬಣ" - ಮಹಾ ಅಧಿವೇಶನ
Thumbnail

ಕಾಪು : ಅಮೇರಿಕಾದ ಬಾನಾ (ಬಂಟ್ಸ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ) 47ನೇ ವಾರ್ಷಿಕೋತ್ಸವದ 25ನೇ ಸಮ್ಮೇಳನ ‘ದಿಬ್ಬಣ’ - ಮಹಾ ಅಧಿವೇಶನ ಜು. 30 ರಿಂದ ಅಗಸ್ಟ್ 2ರವರೆಗೆ ನಾಲ್ಕು ದಿನಗಳ ಪರ್ಯಂತ ಅಮೇರಿಕಾದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜರ್ಷಿ ಕೆ. ವಾಸುದೇವ ಶೆಟ್ಟಿಯವರು ದೇವಳದ ದ್ವಿತೀಯ ಹಂತದ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾಪು ನಗರ ಸಹಿತವಾಗಿ ಪ್ರತಿಯೊಂದು ಗ್ರಾಮಗಳು ಅಭಿವೃದ್ಧಿಯಾಗಬೇಕು, ಪೂರಕವಾಗಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರ ಯೋಜನೆಯನ್ನು ರೂಪಿಸುತ್ತಿದೆ. ಅಮೇರಿಕಾದಲ್ಲಿ ನೆಲೆಸಿರುವ ನಿಮ್ಮಲ್ಲಿ ಯಾರಾದರೂ ಕಾಪುವಿನಲ್ಲಿ ರೆಸಾರ್ಟ್, ಹೋಮ್ ಸ್ಟೇ, ಹೋಟೆಲ್ ಅಥವಾ ಕೈಗಾರಿಕೆಗಳಿಗೆ ಹೂಡಿಕೆ ಮಾಡುವುದಿದ್ದರೆ ಕಾಪು ಚಾರಿಟೇಬಲ್ ಟ್ರಸ್ಟ್ ಸಹಕಾರವನ್ನು ನೀಡುತ್ತದೆ ಎಂದು ಹೇಳಿದರು. 
ನವದುರ್ಗಾ ಲೇಖನ ಯಜ್ಞದ ಪುಸ್ತಕದೊಂದಿಗೆ ಶ್ರೀ ದೇವಿಯ ಪ್ರಸಾದವನ್ನು ಒಂಬತ್ತು ಜನರಿಗೆ ನೀಡಿ ಅವರನ್ನು ಯು.ಎಸ್.ಎ ಸಿಯಾಟಲ್ ನ ಕಾಪು ಕ್ಷೇತ್ರ ಮಾತೃ ವೈಭವ - ಸೇವಾ ಸಮಿತಿಯ ಸದಸ್ಯರನ್ನಾಗಿ ನೇಮಿಸಿ ಪ್ರಥಮವಾಗಿ ಕಾಪು ಕ್ಷೇತ್ರ ಮಾತೃ ವೈಭವ ಸೇವಾ ಸಮಿತಿಗೆ ಚಾಲನೆ ನೀಡಲಾಯಿತು. ಭಾಸ್ಕರ್ ಶೇರಿಗಾರ್ ಬೋಸ್ಟನ್ ನೇತೃತ್ವದಲ್ಲಿ ಈಗಾಗಲೇ ಇರುವ ಸಮಿತಿಯನ್ನು ಕಾಪು ಕ್ಷೇತ್ರ ಮಾತೃ ವೈಭವ ಸೇವಾ ಸಮಿತಿ - ಅಮೇರಿಕಾ ಘಟಕ ಎಂದು ಮರುನಾಮಕರಣಗೊಳಿಸಲಾಯಿತು.

ಸಮಾರಂಭದಲ್ಲಿ ದಿ ಅಸೋಸಿಯೇಷನ್ ಆಫ್ ಕನ್ನಡ ಕೂಟಸ್ ಆಫ್ ಅಮೇರಿಕಾದ ಅಧ್ಯಕ್ಷ ಅಮರ್ ನಾಥ್ ಗೌಡ, ಅಲ್ ಅಮೇರಿಕಾ ತುಳು ಅಸೋಸಿಯೇಷನ್ ಅಧ್ಯಕ್ಷ ಭಾಸ್ಕರ್ ಶೇರಿಗಾರ್ ಬೋಸ್ಟನ್, ಹೆರಂಭ ಇಂಡಸ್ಟ್ರೀಸ್ ಪ್ರೈ. ಲಿ. ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ದುಬೈ ಫಾರ್ಚ್ಯುನ್ ಗ್ರೂಪ್ ಆಡಳಿತ ನಿರ್ದೇಶಕ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಆಸ್ಟ್ರೇಲಿಯಾ ಸಿಡ್ನಿಯ ಒಮೆಗಾ ಇಂಡಸ್ಟ್ರಿಸ್ ಪ್ರೈ. ಲಿ ಆಡಳಿತ ನಿರ್ದೇಶಕರಾದ ಕೆ. ಶಿವರಾಮ ಶೆಟ್ಟಿ, ಬೆಲ್ಲೆವ್ಯೂ ಗೌರವಾನ್ವಿತ ಉಪ ಮೇಯರ್ ಡೇವ್  ಹ್ಯಾಮಿಲ್ಟನ್, ಗೌರವಾನ್ವಿತ ವಾಷಿಂಗ್ಟನ್ ಸ್ಟೇಟ್ ಸೆನೆಟರ್ ಮಂಕ ಧಿಂಗ್ರಾ, ಸಿಯಾಟಲ್ ನ ಭಾರತದ ಗೌರವಾನ್ವಿತ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ, ಬಂಟ್ಸ್ ಅಸೋಸಿಯೇಷನ್ ಆಫ್ ನಾರ್ಥ್ ಅಮೇರಿಕಾ ಇದರ ಅಧ್ಯಕ್ಷರಾದ ಮಂಜುನಾಥ್ ಆರ್. ಶೆಟ್ಟಿ, ಉಪಾಧ್ಯಕ್ಷರಾದ ಹಿತೇಶ್ ಶೆಟ್ಟಿ, ಸದಸ್ಯರಾದ ಸುಮನಾ ನಟರಾಜ್ ಶೆಟ್ಟಿ, ಉಪಾಧ್ಯಕ್ಷರಾದ ರಘು ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಮಿತ ಶೆಟ್ಟಿ, ಸದಸ್ಯರಾದ ಶಾಮ ಶೆಟ್ಟಿ, ಉಪಾಧ್ಯಕ್ಷರಾದ ಸೀಮಾ ಶೆಟ್ಟಿ, ಕಾಪು ದೇವಿಪ್ರಸಾದ್ ಕನ್ಸ್ಟ್ರಕ್ಷನ್ ಪ್ರೈ. ಲಿ ಆಡಳಿತ ನಿರ್ದೇಶಕರಾದ ಬೀನಾ ವಿ. ಶೆಟ್ಟಿ, ಅನನ್ಯ ಶೆಟ್ಟಿ, ಲಕ್ಷ್ಮಿ ಶೆಟ್ಟಿ, ಪವಿತ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.  

ಸಮಾರಂಭದಲ್ಲಿ ಸುಮಾರು 250 ಬಂಟ ಕುಟುಂಬಗಳ 600ಕ್ಕೂ ಅಧಿಕ ಸದಸ್ಯರು ಭಾಗಿಯಾಗಿದ್ದರು.
    

Additional image
05 Aug 2026, 05:48 PM
Category: Kaup
Tags: