ಅನುಮಾನಗಳಿಗೆ ಕಾರಣವಾಗಿದ್ದ ಪರ್ಕಳದ ಗದ್ದೆಯಲ್ಲಿದ್ದ ಕಾರಿನ ವಾರಸುದಾರನನ್ನು ಪತ್ತೆಹಚ್ಚಿದ ಪೊಲೀಸರು
Thumbnail
ಮಣಿಪಾಲ : ಹಲವು ಅನುಮಾನಗಳಿಗೆ ಕಾರಣವಾಗಿದ್ದ ಮಣಿಪಾಲ ಸಮೀಪದ ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನ ಸಮೀಪದ ರಸ್ತೆ ಇಲ್ಲದ ಗದ್ದೆಯಲ್ಲಿ ಎರಡು ದಿನಗಳಿಂದ ನಿಂತಿದ್ದ ಕೇರಳ ತಿರುವನಂತಪುರ ನೋಂದಣಿಯ ಕಾರಿನ ವಾರಸುದಾರರನ್ನು ಮಣಿಪಾಲ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಸರಿಯಾದ ದಾಖಲೆಗಳನ್ನು ನೀಡಿದ ಮಣಿಪಾಲದ ಎಂಬಿಬಿಎಸ್ ವಿದ್ಯಾರ್ಥಿ ಕಾರನ್ನು ರಿವರ್ಸ್ ತೆಗೆಯುವಾಗ ನಿಯಂತ್ರಣ ತಪ್ಪಿ ಗದ್ದೆಗೆ ಇಳಿದಿದೆ. ಪರೀಕ್ಷೆಯ ಒತ್ತಡದಲ್ಲಿ ಇದ್ದುದರಿಂದ ಕಾರನ್ನು ಅಲ್ಲಿಯೇ ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾನೆ. ಪರೀಕ್ಷೆ ಮುಗಿದ ಬಳಿಕ ಕಾರನ್ನು ಕ್ರೇನ್ ಸಹಾಯದಿಂದ ತೆಗೆಯಬಹುದೆಂದು ಯೋಚಿಸಿದ್ದೆ ಎಂದಿದ್ದಾನೆ. ಇದೀಗ ಅನುಮಾನಗಳಿಗೆ ತೆರೆ ಎಳೆದಂತಾಗಿದೆ.
Additional image
15 Nov 2020, 06:50 PM
Category: Kaup
Tags: