ಕುತ್ಯಾರು : ಕೊನೆಗೂ ರಸ್ತೆ ಹೊಂಡಕ್ಕೆ ಸಿಕ್ಕಿತು ಮುಕ್ತಿ
Thumbnail
ಮುದರಂಗಡಿ- ಶಿರ್ವ ಮುಖ್ಯರಸ್ತೆಯ ಕುತ್ಯಾರು ಬ್ಯಾಂಕ್ ಆಫ್ ಬರೋಡ ಬಳಿ ಪೈಪ್ ಅಳವಡಿಸಲು ಅಗೆಯಲಾಗಿದ್ದ ರಸ್ತೆಯನ್ನು ಇಲಾಖೆ ಗುರುವಾರ ಸರಿಪಡಿಸಿ ಡಾಮರೀಕರಣಗೊಳಿಸಿದೆ. ತಿರುವಿನ ರಸ್ತೆಯಲ್ಲಿ ಹೊಂಡ ಉಂಟಾಗಿ ತಿಂಗಳುಗಳೇ ಕಳೆದು ಸಣ್ಣಪುಟ್ಟ ಅಪಘಾತಗಳಾಗಿ ಜೊತೆಗೆ ಡಾಮರೀಕರಣಕ್ಕಾಗಿ ಜಲ್ಲಿ ಹಾಕಲಾಗಿದ್ದು ಪರಿಸರವಿಡೀ ಧೂಳುಮಯವಾಗಿತ್ತು. ಇದೀಗ ಈ ರಸ್ತೆಯನ್ನು ಸರಿಪಡಿಸಿದ್ದು ಸ್ಥಳೀಯರು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ತಕ್ಷಣ ಸ್ಪಂದಿಸಿದ ಅಧಿಕಾರಿವರ್ಗ, ಗುತ್ತಿಗೆದಾರರಿಗೆ ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್ ಹಾಗೂ ಕುತ್ಯಾರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂಪತ್ ಕುಮಾರ್ ಕೇಂಜ ಸಾರ್ವಜನಿಕರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
Additional image
11 Dec 2020, 01:41 PM
Category: Kaup
Tags: