ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ
Thumbnail
ಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ಅಮೋಘ ಪಾಂಡಿತ್ಯದ ಮೂಲಕ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರು ಇಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಅಂಬಲಪಾಡಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಹಲವು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಜೊತೆಗೆ ಅನುವಾದವನ್ನು ಮಾಡಿರುತ್ತಾರೆ. ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ತುಳುಲಿಪಿಯಲ್ಲಿಯೂ ಪಾಂಡಿತ್ಯವಿದ್ದ ಇವರು ಉಡುಪಿ ಮಠದಲ್ಲಿದ್ದ ತುಳು ಲಿಪಿಯ ಎಲ್ಲಾ ಗ್ರಂಥಗಳಿಗೆ ವ್ಯಾಖ್ಯಾನವನ್ನು ಬರೆದವರಾಗಿದ್ದಾರೆ. ಜ್ಞಾನ ಹಂಚಲು ತುಡಿಯುವ ಮನಸ್ಸುಳ್ಳವರಾಗಿದ್ದರು.
13 Dec 2020, 12:53 PM
Category: Kaup
Tags: