ಶ್ರೀ ಕ್ಷೇತ್ರ ಮಾರಣಕಟ್ಟೆ : ಸರಳ ಮಕರ ಸಂಕ್ರಾಂತಿ ಉತ್ಸವ
Thumbnail
ಕುಂದಾಪುರ ತಾಲೂಕಿನ ಚಿತ್ತೂರು ಶ್ರೀ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಉತ್ಸವವು ಜನವರಿ 14ರಿಂದ 16ರವರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಗುವುದು. ಸಾರ್ವಜನಿಕರಿಗೆ ಗೆಂಡ ಸೇವೆಗೆ ಅವಕಾಶವಿಲ್ಲ. ಉಳಿದಂತೆ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಜರಗಲಿರುವುದು. ಮಹಾಮಂಗಳಾರತಿ ಜನವರಿ 14ರಂದು ಪೂರ್ವಾಹ್ನ 8:30 ಕ್ಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
05 Jan 2021, 04:49 PM
Category: Kaup
Tags: