ಕಾಪು ದೀಪಸ್ತಂಭ 5 ತಿಂಗಳ ಹಿಂದೆ ಹಾನಿಯಾದ ಮೆಟ್ಟಿಲು, ಗೋಡೆ ಇನ್ನೂ ದುರಸ್ತಿಯಾಗಿಲ್ಲ ಪ್ರವಾಸೋದ್ಯಮ ಇಲಾಖೆಯ ಜಾಣ ಮೌನ
Thumbnail
ಉಡುಪಿ ಜಿಲ್ಲೆಯ ಕಾಪು ಕಡಲ ಕಿನಾರೆಯಲ್ಲಿರುವ ಬ್ರಿಟಿಷ್ ಕಾಲದಲ್ಲಿ ನಿರ್ಮಿಸಲ್ಪಟ್ಟ ಕಾಪು ದೀಪಸ್ತಂಭ ವೀಕ್ಷಿಸಲು ದಿನನಿತ್ಯ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಇತ್ತೀಚಿನ ಮಳೆಯ ಸಂದರ್ಭ ದೀಪಸ್ತಂಭದ ಆರಂಭದ ಮೆಟ್ಟಿಲುಗಳು ಮತ್ತು ಗೋಡೆ ಹಾನಿಗೊಂಡಿದೆ. 5 ತಿಂಗಳಿಂದ ಈ ರೀತಿಯ ಅವಸ್ಥೆ ಇದ್ದರೂ ಈವರೆಗೂ ದುರಸ್ತಿ ಕಂಡಿಲ್ಲ. ಈ ಬಗ್ಗೆ ಕೆಳ ತಿಂಗಳ ಹಿಂದೆ ಪತ್ರಿಕೆಯಲ್ಲಿ ವರದಿ ಪ್ರಕಟವಾದರೂ ಇನ್ನೂ ಎಚ್ಚೆತ್ತು ಕೊಳ್ಳದ ಪ್ರವಾಸೋದ್ಯಮ ಇಲಾಖೆ ಸುಂದರ ಪ್ರವಾಸಿ ತಾಣವಾದ ಈ ಸ್ಥಳದ ಇಂತಹ ಸ್ಥಿತಿಯನ್ನು ಈವರೆಗೂ ಗಮನಿಸದಂತಿದ್ದು, ಆದಷ್ಟು ಬೇಗ ಸರಿಪಡಿಸಬೇಕಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Additional image Additional image
28 Jan 2021, 12:36 PM
Category: Kaup
Tags: