ಬಂಟಕಲ್ಲು : ಆರಕ್ಷರ ಠಾಣೆ ಶಿರ್ವ, ನಾಗರಿಕ ಸೇವಾ ಸಮಿತಿ ಬಂಟಕಲ್ಲು ಇವರ ಆಶ್ರಯದಲ್ಲಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದೊಂದಿಗೆ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ
Thumbnail
ಬಂಟಕಲ್ಲು : ಆರಕ್ಷರ ಠಾಣೆ ಶಿರ್ವ, ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರ ಆಶ್ರಯದಲ್ಲಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದೊಂದಿಗೆ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮವು ಜರುಗಿತು. ಬಂಟಕಲ್ಲು ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿ ಗಳೊಂದಿಗೆ ಜಾಗೃತಿ ಜಾಥವು ಕಾಲೇಜಿನಿಂದ ಬಂಟಕಲ್ಲು ಪೇಟೆಯವರೆಗೆ ನಡೆಯಿತು. ಶಿರ್ವ ಠಾಣಾಧೀಕಾರಿ ಶ್ರೀ ಶ್ರೀಶೈಲ ಮುರಗೋಡುರವರು ಹಸಿರು ನಿಶಾನೆ ತೋರಿಸಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥದಲ್ಲಿ ವಾಹನ ಜಾಗೃತಿ ಫಲಕಗಳನ್ನು ಪ್ರದರ್ಶಿಸಲಾಯಿತು. ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರ ಕಛೇರಿವರೆಗೆ ಜಾಥ ನಡೆಯಿತು. ನಂತರ ಸಮಿತಿಯ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರು ನಾಗರಿಕರ ಭದ್ರತೆ ಹಿತದೃಷ್ಟಿಯಿಂದ ಪೇಟೆಯ ಮುಖ್ಯ ರಸ್ತೆಗೆ ಅಳವಡಿಸಿದ 3 ಸಿ.ಸಿ ಕೆಮಾರಗಳನ್ನು ಠಾಣಾಧಿಕಾರಿಯವರು ಉಧ್ಘಾಟಿಸಿದರು. ನಂತರ ರಸ್ತೆ ಸುರಕ್ಷಾ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಠಾಣಾಧಿಕಾರಿಯವರು ರಸ್ತೆ ಸುರಕ್ಷಾ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸಬೇಕು, ಈ ಮೂಲಕ ನಿಮ್ಮ ಜೀವ ರಕ್ಷಣೆ ಮಾಡಿ, ಹೆಲ್ಮೆಟನ್ನು ಖಡ್ಡಾಯವಾಗಿ ಧರಿಸಿ, ಸಂಚಾರದ ಸಮಯದಲ್ಲಿ ವಾಹನದ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಇಡುವಂತೆ ತಿಳಿಸಿ ಮುಖ್ಯವಾಗಿ ಯುವಕರು, ಯುವತಿಯರು ಈ ನಿಟ್ಟಿನಲ್ಲಿ ಜಾಗೃತಿವಹಿಸುವಂತೆ ತಿಳಿಸಿದರು. ಇಲಾಖೆ 112 ತುರ್ತು ಕರೆ ಸಂಖ್ಯೆಯ ಮಾಹಿತಿ ನೀಡಿದರು. ಬಂಟಕಲ್ಲು ನಾಗರೀಕ ಸೇವಾ ಸಮಿತಿಯವರ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಿ.ಸಿ. ಕೆಮಾರ ಅಳವಡಿಕೆ ಬಗ್ಗೆ ಕೃತಜ್ಞತೆಯನ್ನು ತಿಳಿಸಿದರು. ಇಂತಹ ಕಾರ್ಯಕ್ರಮವನ್ನು ಸಂಯೋಜಿಸಿದ ನಾಗರಿಕ ಸೇವಾ ಸಮಿತಿಯನ್ನು ಇಲಾಖಾ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಎಸೋಸಿಯೇಶನ್ ನ ಪ್ರಾಧಾನ ಕಾರ್ಯದರ್ಶಿ ಶ್ರೀ ರಮೇಶ್ ಕೊಟ್ಯಾನ್ ರವರು ನಾಗರಿಕ ಸಮಿತಿಯ ಶ್ಲಾಘನೀಯ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಸಾಮಾಜಿಕ ಕಾರ್ಯಕ್ರಮಗಳಿಗೆ ಎಸೋಸಿಯೇಶನ್ ನ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಶ್ರೀ ಗಣೇಶ್ ಶೆಟ್ಟಿ, ಬಂಟಕಲ್ಲು ಕಾರು ಚಾಲಕರ ಮಾಲಕರ ಸಂಘದ ಅಧ್ಯಕ್ಷ ಉಮೇಶ್ ರಾವ್, ಬಂಟಕಲ್ಲು ರಿಕ್ಷಾ ಚಾಲಕ ಮಾಲಕರ ಸಂಘದ ಶ್ರೀ ಸತೀಶ್ ಬಂಟಕಲ್ಲು ಉಫಸ್ಥಿತರಿದ್ದರು. ಸಮಿತಿಯ ಉಪಾಧ್ಯಕ್ಷ ಶ್ರೀ ಪುಂಡಲೀಕ ಮರಾಠೆ, ಕೋಶಾಧಿಕಾರಿ ಶ್ರೀ ಜಗದೀಶ ಆಚಾರ್ಯ, ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಶ್ರೀ ಮಧುಕರ್, ಬಂಟಕಲ್ಲು ದೇವಾಸ್ಥಾನದ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶ್ರೀ ಉಮೇಶ್ ಪ್ರಭು, ಬಂಟಕಲ್ಲು ವಿಶ್ವಕರ್ಮ ಸಂಘದ ಶ್ರೀ ದಾಮೋದರ ಆಚಾರ್ಯ, ಬಿ.ಸಿ ರೋಡ್ ರಿಕ್ಷಾ ಚಾಲಕ ಮಾಲಕರ ಸಂಘದ ಶ್ರೀ ಡೇನಿಸ್, ಶಿರ್ವ ಆರಕ್ಷಕರ ಠಾಣೆಯ ಸಿಬ್ಬಂದಿ ವರ್ಗ , ನಾಗರಿಕ ಸೇವಾ ಸಮಿತಿಯ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಆರ್ ಪಾಟ್ಕರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಸಮಿತಿ ಕಾರ್ಯದರ್ಶಿ ಶ್ರೀ ದಿನೇಶ್ ದೇವಾಡಿಗ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.
Additional image Additional image Additional image
01 Feb 2021, 11:02 PM
Category: Kaup
Tags: