ಬಿರುವೆರ್ ಕಾಪು ಸೇವಾ ಟ್ರಸ್ಟ್ : ಜ್ಞಾನದೀವಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮ
ಕಾಪು ತಾಲೂಕಿನ ಪ್ರತಿಭಾವಂತ ಬಿಲ್ಲವ ಹಾಗೂ ಇತರ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2020 -21 ನೇ ಸಾಲಿನ ಜ್ಞಾನದೀವಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವು ಬಿರುವೆರ್ ಕಾಪು ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಇದರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಫೆಬ್ರವರಿ 21, ಆದಿತ್ಯವಾರ ಸಂಜೆ 3.30 ರಿಂದ 6 ಗಂಟೆಯ ತನಕ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಇದರ ಅಧ್ಯಕ್ಷರಾದ ವಿಕ್ರಂ ಕಾಪು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ, ಕಾಪು ಪುರಸಭೆ ಅಧ್ಯಕ್ಷರಾದ ಅನಿಲ್ ಕುಮಾರ್, ಶ್ರೀ ಗುರುಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರಿನ ರಮೇಶ್ ಜಿ. ಅಮೀನ್, ಕಾಪು ಬಿಲ್ಲವರ ಸಹಾಯಕ ಸಂಘ (ರಿ.)ದ ಗೌರವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಕಾಪುವಿನ ಉದ್ಯಮಿ ದೀಪಕ್ ಕುಮಾರ್ ಎರ್ಮಾಳ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
