ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಬಜೆಟ್ ನಲ್ಲಿ ಯಾವುದೇ ಘೋಷಣೆ ಇಲ್ಲ : ಉಡುಪಿ ಜಿಲ್ಲಾ NSUI ಉಪಾಧ್ಯಕ್ಷ ಮೊಹಮ್ಮದ್ ಝಮೀರ್
Thumbnail
ಕೊರೊನ ಸಂಕಷ್ಟ ನಂತರ ಶಾಲಾ ಕಾಲೇಜು ಒಪನ್ ಆಗಿದೆ ಆದರೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಾಲಾ ಫೀಸ್ ಕಟ್ಟುವ ಪರಿಸ್ಥಿತಿಯಲ್ಲಿ ಇಲ್ಲ. ಬಸ್ ನಲ್ಲಿ ಬರುವ ಸಾಮರ್ಥ್ಯವು ಇಲ್ಲ ಹಾಗೂ ಕೊರೊನ ಸಂಕಷ್ಟದಿಂದ ಅನೇಕ ವಿಧ್ಯಾರ್ಥಿಗಳು ಶಾಲಾ ಕಾಲೇಜ್ ಗೆ ಹೋಗುವುದಕ್ಕೂ ಕಷ್ಟವಾಗಿದೆ. ಬಹುದಿನಗಳ ಬೇಡಿಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಕೂಡ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡದೆ ಶಾಲಾ ಕಾಲೇಜು ವಿದ್ಯಾರ್ಥಿಗಳಾದ ನಮ್ಮ ಮನವಿಗೆ ಸ್ಪಂದಿಸದೇ ಇರುವುದು ಈ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಇಲ್ಲದಿದ್ದರೆ ಉಡುಪಿ ಜಿಲ್ಲಾದ್ಯಾಂತ NSUI ವತಿಯಿಂದ ಪ್ರತಿಭಟನೆಯನ್ನು ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ NSUI ವಿಧ್ಯಾರ್ಥಿ ಸಂಘಟನೆ ಉಪಾಧ್ಯಕ್ಷ ಮೊಹಮ್ಮದ್ ಝಮೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
09 Mar 2021, 10:23 AM
Category: Kaup
Tags: