2015ರಲ್ಲಿ 3500 ಐಸ್ ಕ್ರೀಮ್ ಕಡ್ಡಿ ಮತ್ತು 750 ಬೆಂಕಿಕಡ್ಡಿ ಯಿಂದ ರಚಿಸಿದ ಗಣಪತಿಯ ಕಲಾಕೃತಿ ಯ ಮೂಲಕ 'ಇಂಡಿಯಾ ಬುಕ್ ಆಫ್ ರೆಕಾರ್ಡ್ 'ಗೆ ಸೇರ್ಪಡೆ ಯಾಗಿ ಸುದ್ದಿಯಾಗಿದ್ದ ಉಡುಪಿ ಯ ಮರ್ಣೆ ಗ್ರಾಮದ ಯುವ ಕಲಾವಿದ ಮಹೇಶ್ ಮರ್ಣೆಯವರು ಇದೀಗ ದೇವಾಲಯಗಳ ಮುಂದೆ ಪೂಜನೀಯವಾಗಿ ಗುರುತಿಸಲ್ಪಡುವ ಅಶ್ವಥ ಎಲೆಯಲ್ಲಿ ಅತ್ಯಂತ ಸೂಕ್ಷ್ಮ ವಾಗಿ ಬ್ಲೇಡ್ ಸಹಾಯದಿಂದ ಕ್ರಿಕೆಟ್ ನ ದಂತಕತೆ ಕತೆ ಎಂದೇ ಖ್ಯಾತಿ ಪಡೆದ ಸಚಿನ್ ತೆಂಡುಲ್ಕರ್ ರವರ ಭಾವ ಚಿತ್ರವನ್ನು ಕೇವಲ 7ನಿಮಿಷದಲ್ಲಿ ರಚಿಸಿ ಉತ್ತರ ಪ್ರದೇಶದ ಬರೇಲಿಯ ಲಾಟಾ ಪ್ರತಿಷ್ಠಾನಕ್ಕೆ ಈ ತಿಂಗಳ 24 ರಂದು ವೀಡಿಯೋ ಚಿತ್ರೀಕರಿಸಿ ಪಟ್ಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕಾಂತ್ ಪ್ರಭು ,ವಕೀಲರು ಗಳಾದ ಸಂತೋಷ್ ಕುಮಾರ್ ಮೂಡುಬೆಳ್ಳೆ ,ಅರೂರು ಸುಕೇಶ್ ಶೆಟ್ಟಿ ಇವರ ಸಾಕ್ಷಿಗಳೊಂದಿಗೆ ಕಳುಹಿಸಿದ್ದರು .ಅದನ್ನು ವೀಕ್ಷಿಸಿ ಸೂಕ್ಷ್ಮ ಕಲಾಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಕ್ಸ್ ಕ್ಲ್ಯೂಸಿವ್ ವಲ್ಡ್ ರೆಕಾರ್ಡ್ ಗೆ ಮಹೇಶ್ ರವರ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ.