ಉಡುಪಿ : ಭಾರತ್ ಪ್ರೆಸ್ ನ ಮಾಲಕರೂ ಉಡುಪಿ ಜಿಲ್ಲಾ ಮುದ್ರಣಾಲಯ ಗಳ ಮಾಲಕರ ಸಂಘ ದ ಮಾರ್ಗದರ್ಶಕರು ಧಾರ್ಮಿಕ ಚಿಂತಕರಾದ ದೇವದಾಸ್ ಪೈ ಯವರು ಏಪ್ರಿಲ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಸಂತಾಪ ವನ್ನು ಸೂಚಿಸಿದೆ. ಅಧ್ಯಕ್ಷರಾದ ಎಮ್ ಮಹೇಶ್ ಕುಮಾರ್, ಗೌರವ ಸಲಹೆಗಾರರಾದ ಅಶೋಕ್ ಶೆಟ್ಟಿ, ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ. ಬಂಗೇರ, ಮಾಜಿ ಅಧ್ಯಕ್ಷರಾದ ರಮೇಶ್ ತಿಂಗಳಾಯ, ಸದಸ್ಯರಾದ ಅನಿಲ್ ಶೆಟ್ಟಿ ಉಪಸ್ಥಿತರಿದ್ದರು.