ಕಾಪು : ಇಂದು ಮರ್ಕೋಡಿ ಪರಿಸರದ ಶುಚಿತ್ವವು ಇನ್ನಂಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರೋಕೆಶ್ ಮತ್ತು ತಂಡದಿಂದ ನಡೆಯಿತು.. ಗ್ರಾ.ಪಂ ಸದಸ್ಯರಾದ ನಿತೇಶ್ ಸಾಲ್ಯಾನ್ ಕಲ್ಯಾಲು, ಸ್ಥಳೀಯರಾದ ರಾಜ್ ಸಾಲ್ಯಾನ್ ಮತ್ತು ಬಾಲಕೃಷ್ಣ ಆರ್. ಕೋಟ್ಯಾನ್ ಕಾಪು ಉಪಸ್ಥಿತರಿದ್ದು ಮರ್ಕೊಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಇನ್ನಂಜೆ ಗ್ರಾ. ಪಂ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ, ಇನ್ನಂಜೆ ಗ್ರಾ. ಪಂ. ಸದಸ್ಯರಾದ ದಿವೇಶ್ ಶೆಟ್ಟಿ ಹಾಗೂ ಮಾಲಿನಿ ಶೆಟ್ಟಿಯವರು ಸ್ವಚ್ಛತಾ ಸಿಬ್ಬಂದಿಗಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ. ಸ್ಥಳೀಯರೊಂದಿಗೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿಯೂ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯಿತ್ತರು.
ಕಾಪು ಠಾಣೆಯ ಹೊಯ್ಸಳದ ಸಬ್ ಇನ್ಸ್ಪೆಕ್ಟರ್ ರವರು ಬಂದು ತಾವು ಮಾಡುವ ಕೆಲಸ ಅಭಿನಂದನಾರ್ಹ ಎಂದು ಪ್ರಶಂಸಿಸಿ ಇನ್ನು ಮುಂದೆ ಈ ಪರಿಸರದಲ್ಲಿ ತ್ಯಾಜ್ಯ ಬಿಸಾಡುವವರ ಮಾಹಿತಿಕೊಟ್ಟರೆ ತಾನು ಕ್ರಮ ಕೈಗೊಳ್ಳುವುದಾಗಿ ಭರವಸೆ ಇತ್ತರು.