ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೋವಿಡ್ ಪ್ಯಾಕೇಜ್ ಘೋಷಿಸಲು ಉಡುಪಿ ಜಿಲ್ಲೆಯ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಮುಖ್ಯಮಂತ್ರಿಗೆ ಮನವಿ

Posted On: 22-05-2021 12:18PM

ಉಡುಪಿ : ದೇಶದಲ್ಲಿ ಹಾಗೂ ನಮ್ಮ ರಾಜ್ಯದಲ್ಲಿ ಲಾಕ್ ಡೌನ್ ಆಗಿರುವ ಕಾರಣ ತುಳುನಾಡ ದೈವ ಚಾಕ್ರಿ ವರ್ಗದವರ ಹಲವಾರು ಸಮಸ್ಯೆಗಳು ಎದುರಿಸುತ್ತಿದ್ದಾರೆ ಯಾವುದೇ ಆದಾಯವಿಲ್ಲ.

ಸಾವಿರಾರು ವರ್ಷಗಳ ಇತಿಹಾಸವಿರುವ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲಾ ವರ್ಗದವರು ತುಂಬಾ ಸಂಕಷ್ಟದಲ್ಲಿದ್ದಾರೆ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ದೈವಾರಾಧನೆಯನ್ನು ತಮ್ಮ ಕುಲ ಕಸುಬಾಗಿ ಅವಲಂಬಿಸಿದ್ದಾರೆ. ಅವರ ಕುಟುಂಬದ ಖರ್ಚುವೆಚ್ಚಗಳು ಇದರಲ್ಲಿ ಬರುವ ಸಂಭಾವನೆಯಲ್ಲಿ ಕುಟುಂಬವನ್ನು ನಡೆಸಬೇಕಾಗಿದೆ.

ಕಳೆದ ಬಾರಿಯೂ ಕೋವಿಡ್ ಮೊದಲ ಅಲೆಯಲ್ಲಿ ಪ್ಯಾಕೇಜ್ ವಂಚಿತರಾಗಿದ್ದಾರೆ. ಈ ಬಾರಿಯೂ ಕೂಡ ಎರಡನೇ ಕೋವಿಡ್ ಪ್ಯಾಕೇಜ್ ಪರಿಹಾರದಲ್ಲಿ ವಂಚಿತರಾಗಿದ್ದಾರೆ. ನಾವು ಯಾವಾಗಲೂ ಸರ್ಕಾರಕ್ಕೆ ಮನವಿ ಮಾಡಿ ಮಾಡಿ ಸೋತು ಹೋಗಿದ್ದೇವೆ ದಯಮಾಡಿ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪ್ಯಾಕೇಜನ್ನು ಬಿಡುಗಡೆ ಮಾಡಬೇಕೆಂದು ವಿನಂತಿಸಿದ್ದಾರೆ.