(ನಮ್ಮ ಕಾಪು ವರದಿ) : ಸದಾ ಒಂದಿಲ್ಲೊಂದು ಸಾಮಾಜಿಕ ಸೇವೆಯಲ್ಲಿ ಭಾಗಿಯಾಗುತ್ತಾ, ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಹಾಗೂ ಪ್ರಸ್ತುತ ಲಾಕ್ಡೌನ್ ನಲ್ಲಿಯೂ ಎಡೆಬಿಡದೆ ನಿತ್ಯ ನಿರಂತರವಾಗಿ ಅನ್ನದಾನ, ದಿನಸಿ ಕಿಟ್ ವಿತರಣೆ ಮಾಡುವ ಇನ್ನಂಜೆ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ಮಡುಂಬು ಕೆ. ಪಿ ಶ್ರೀನಿವಾಸ ತಂತ್ರಿ ಇವರು ಇಂದು ಪಡು ಕಾಪು ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಇವರ ಅಪೇಕ್ಷೆಯ ಮೇರೆಗೆ ಸುಬಯ್ಯ ತೋಟ ಕಾಪು ಪಡು ಇಲ್ಲಿನ 23 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಯುವಸೇನೆ ಮಡುಂಬು ತಂಡದ ಅಧ್ಯಕ್ಷರಾದ ವರುಣ್ ಶೆಟ್ಟಿ ಮಡುಂಬು ಹಾಗೂ ಉಮೇಶ್ ಅಂಚನ್, ಪ್ರಕಾಶ್ ಕೋಟ್ಯಾನ್, ಕಾರ್ತಿಕ್ ಶೆಟ್ಟಿ ಮಂಡೇಡಿ, ರವಿ ಕಲ್ಯಾಲು, ಪೃಥ್ವಿ ಶೆಟ್ಟಿ ಮಡುಂಬು ಮತ್ತಿತರರು ಉಪಸ್ಥಿತರಿದ್ದರು.