ಕಾಪು : ಕೊರೋನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಮಾಜ ಸೇವಕಿ ನೀತಾ ಪ್ರಭು ಕಾಪು ಮತ್ತು ಹಿಂದು ಜಾಗರಣ ವೇದಿಕೆ ಶಿರ್ವ ವಲಯ ವತಿಯಿಂದ ರೇಶನ್ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನೀತಾ ಪ್ರಭು ಕಾಪು , ಅಲೆವೂರು ಶ್ರೀಕಾಂತ್ ನಾಯಕ್ ,ವೈದ್ಯಾಧಿಕಾರಿ ಗಾಯತ್ರಿ ,ಚರಣ್ ಶಾಂತಿ ಕಟಪಾಡಿ ,ಗಿರಿಧರ್ ಪ್ರಭು , ಹಿಂದು ಜಾಗರಣ ವೇದಿಕೆ ಜಿಲ್ಲಾ ಪ್ರಮುಖರಾದ ಉಮೇಶ್ ಸೂಡ , ಹಿಂ.ಜಾ.ವೇ ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಗುರುಪ್ರಸಾದ್ ಸೂಡ , ಹಿಂ.ಜಾ.ವೇ ಶಿರ್ವ ವಲಯ ಅಧ್ಯಕ್ಷರಾದ ರಕ್ಷಿತ್ ಶಿರ್ವ ಮತ್ತಿತರರು ಉಪಸ್ಥಿತರಿದ್ದರು.