ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ಒಕ್ಕೂಟ ಮತ್ತು ಶ್ರೀ ದೂಮಾವತಿ ಸ್ವಸಹಾಯ ಸಂಘ ಕಾಪು ಇದರ ಜಂಟಿ ಸಹಯೋಗದಲ್ಲಿ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಮೇಲ್ವಿಚಾರಕರಾದ ಶ್ರೀಮತಿ ಮಮತಾ, ಕಾಪು ಪುರಸಭಾ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಒಕ್ಕೂಟದ ಸೇವಾ ಪ್ರತಿನಿಧಿ ಪ್ರೇಮ ಆರ್. ಕೋಟಿಯನ್, ಸುಮನಾ, ಲಕ್ಷ್ಮಿಕಾಂತ್ ದೇವಾಡಿಗ ಒಕ್ಕೂಟದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.