ಕಾಪು : ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಹೆಜಮಾಡಿ ಸರಕಾರಿ ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘ ಜಂಟಿ ಆಶ್ರಯದಲ್ಲಿ ಹೆಜಮಾಡಿ ಸರಕಾರಿ ಪ್ರೌಢ ಶಾಲಾ ವಠಾರದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಕ್ಕೆ ರೋಟರಿ ಅಧ್ಯಕ್ಷ ಮಹಮ್ಮದ್ ನಿಯಾಜ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರೋಟರಿ ವಲಯ ಸಂಯೋಜಕ ರಮೀಜ್ ಹುಸೇನ್, ನಿಕಟ ಪೂರ್ವ ಅಧ್ಯಕ್ಷ ಕೇಶವ್ ಸಾಲ್ಯಾನ್, ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಈಶ್ವರ್ ಎ., ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸುಲೃೆಮಾನ್ ಹೆಚ್ ಕೆ., ಹಳೆವಿಧ್ಯಾರ್ಥಿ ಸಂಘದ ಅಧ್ಯಕ್ಷ ಸುಧೀರ್ ಕರ್ಕೇರ, ಪೂರ್ವ ಅಧ್ಯಕ್ಷ ರಿಯಾಜ್ ಮುದರಂಗಡಿ, ಕಾರ್ಯದರ್ಶಿ ಬಿ.ಯಸ್ ಅಚಾರ್ಯ, ಸದಸ್ಯರಾದ ಸುಧಾಕರ್ ಕೆ, ಎಮ್. ಎಸ್ ಶಾಫಿ, ಶರೀಫ್, ತಸ್ನೀನ್ ಅರ್ಹ ಉಪಸ್ಥಿತರಿದ್ದರು.