ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ತುಳುನಾಡಿನಲ್ಲಿ ಧಾರ್ಮಿಕ ಕಾರ್ಯ ನಡೆಸಲು ಅನುಮತಿಗಾಗಿ ಸರಕಾರದ ಗಮನಕ್ಕೆ ತರುವಂತೆ ತುಳುನಾಡ ದೈವಾರಾಧಕರ ಒಕ್ಕೂಟದ ವತಿಯಿಂದ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಮನವಿ

Posted On: 22-07-2021 12:28PM

ಕಾಪು : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆ ವತಿಯಿಂದ ಇಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಇವರಿಗೆ ಅವರ ಕಚೇರಿಯಲ್ಲಿ ಒಕ್ಕೂಟದ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ವಿವಿಧ ಬೇಡಿಕೆಗಳ ಮನವಿಯನ್ನು ಕೊಡಲಾಯಿತು.

ಎರಡನೆ ಬಾರಿಯ ಕೊರೊನ ತುರ್ತು ಸಂದರ್ಭದಲ್ಲಿ ಸರ್ಕಾರದಿಂದ ದೈವ ಚಾಕ್ರಿ ವರ್ಗದವರಿಗೆ ಯಾವುದೇ ಪ್ಯಾಕೆಜ್ ಬರಲಿಲ್ಲ ಹಾಗೂ ಉಡುಪಿ ಮತ್ತು ಮಂಗಳೂರಿನಲ್ಲಿ ದೈವಸ್ಥಾನಗಳಲ್ಲಿ ನಡೆಯುವ ಮಾರಿಪೂಜೆ, ದರ್ಶನ ಸೇವೆ, ತಂಬಿಲ ಸೇವೆ ಹಾಗೂ ಮುಂತಾದ ಪೂಜಾ ಕಾರ್ಯಕ್ರಮಗಳಿಗೆ ಸರ್ಕಾರದ ಕಟ್ಟುನಿಟ್ಟಾದ 150 ಜನ ಸೀಮಿತಕ್ಕೆ ದೈವಾರಾಧನೆ ನಡೆಸಲು ಸರ್ಕಾರದಿಂದ ಅನುಮತಿ ಬರಲಿಲ್ಲ. ಇದರಿಂದ ದೈವ ಚಾಕ್ರಿಯವರು ತುಂಬ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಇದಕ್ಕೆ ಸೂಕ್ತವಾಗಿ ನಿಮ್ಮ ಮುಖಾಂತರ ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿ ಎಂದು ಮನವಿಯಲ್ಲಿ ಒಕ್ಕೂಟದ ಪರವಾಗಿ ವಿನಂತಿಸಿದರು.

ಮನವಿಯನ್ನು ಪಡೆದುಕೊಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮನವಿಯ ಬಗ್ಗೆ ಈ ದಿನ ಮುಖ್ಯಮಂತ್ರಿ ಹಾಗೂ ಇದಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಮಾತಾಡುತ್ತೇನೆ. ನಿಮ್ಮ ಯಾವುದೇ ಸಮಸ್ಯೆಗೆ ನಿಮ್ಮೊಂದಿಗೆ ಬೆಂಬಲವಾಗಿ ನಾನಿರುತ್ತೇನೆ ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರವಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ, ನವೀನ್ ಕುಂಜಿಬೆಟ್ಟು, ಸುದರ್ಶನ್ ಪೂಜಾರಿ ಪನೋಲಿಬೈಲ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.