ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಜಂಟಿ ಸಹಯೋಗದಲ್ಲಿ ನಾಳೆ (1-8-21) ಬೆಳಿಗ್ಗೆ 10.30 ಕ್ಕೆ ಪಡುಬಿದ್ರಿ ಅಬ್ಬೇಡಿ ರಸ್ತೆಯ ಆರ್ ಆರ್ ಕಾಲೋನಿಯಲ್ಲಿ ಆಟಿದ ಪಂಥ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಡಾ| ವೈ. ಎನ್. ಶೆಟ್ಟಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಮಹಮ್ಮದ್ ನಿಯಾಜ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಶೋದ ,ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಎನ್. ಶೆಟ್ಟಿ, ವಲಯ 5ರ ವಲಯ ಸಂಯೋಜಕರಾದ ರಮೀಝ್ ಹುಸೈನ್, ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಅನಿತಾ ಬಿ.ವಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.