ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

92 ಹೇರೂರು : ಶ್ರೀ ಗುರು ರಾಘವೇಂದ್ರ ಚೆಂಡೆ ಬಳಗ ಉದ್ಘಾಟನೆ, ಗುರುವಂದನ ಕಾರ್ಯಕ್ರಮ

Posted On: 22-08-2021 10:30PM

ಕಾಪು : 92 ಹೇರೂರಿನ ಶ್ರೀ ಗುರು ರಾಘವೇಂದ್ರ ಚೆಂಡೆ ಬಳಗವನ್ನು ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ ಪ್ರಭು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹೇರೂರು ಗ್ರಾಮದಲ್ಲಿ ಉಚಿತವಾಗಿ ಚೆಂಡೆ ತರಬೇತಿಯನ್ನು ಪ್ರಾರಂಭಿಸಿ ಇಂದು ಗುರುವಂದನ ಕಾರ್ಯಕ್ರಮವನ್ನು ಮಾಡುತ್ತಿರುವುದಕ್ಕೆ ಶುಭ ಹಾರೈಸಿದರು.

ಮಜೂರು ಗ್ರಾಮಪಂಚಾಯತ್ನ ಉಪಾಧ್ಯಕ್ಷರಾದ ಮಧುಸೂದನ ಸಾಲಿಯಾನ್ ರವರು ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಿ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಚೆಂಡೆ ಬಳಗದ ಸದಸ್ಯರನ್ನು ಅಭಿನಂದಿಸಿದರು. ಚೆಂಡೆ ಬಳಗದ ಅಧ್ಯಕ್ಷರಾದ ದಿನೇಶ್ ದೇವಾಡಿಗ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಉಚಿತ ಚೆಂಡೆ ತರಬೇತಿಯನ್ನು ನಡೆಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ಸಹಕರಿಸಿದ ಹೊರದೇಶದಲ್ಲಿರುವ ಶ್ರೀಪತಿ ಪ್ರಭು ಹೇರೂರು ಇವರಿಗೆ ಕೃತಜ್ಞತೆಯನ್ನು ಸಲ್ಲಿಸಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನು ಇದಕ್ಕಿಂತ ಉತ್ತಮ ಅಂಕಗಳನ್ನು ಗಳಿಸಿ ಒಳ್ಳೆಯ ಜೀವನ ನಡೆಸಲಿ ಎಂದು ಶುಭ ಹಾರೈಸಿದರು.

ಚೆಂಡೆ ತರಬೇತಿ ನೀಡಿದ ಮುಲ್ಕಾಡಿ ರಾಘವೇಂದ್ರ ಭಟ್ ಇವರಿಗೆ ಚೆಂಡೆ ಬಳಗದ ವಿದ್ಯಾರ್ಥಿಗಳು ಫಲಪುಷ್ಪ ಗುರು ಕಾಣಿಕೆಯನ್ನು ನೀಡಿ ಸನ್ಮಾನಿಸಿದರು. ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ ದೇವಾಡಿಗ, ಮಹಿಳಾ ಬಳಗದ ಅಧ್ಯಕ್ಷರಾದ ಶಶಿಕಲಾ ದೇವಾಡಿಗ, ದೇವಾಡಿಗರ ಸಂಘದ ಶಂಕರ್ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೇರೂರು ಸೇವಾ ಪ್ರತಿನಿಧಿ ಶ್ರೀಮತಿ ವಸಂತಿ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಚೆಂಡೆ ಬಳಗದ ವಿದ್ಯಾ ಆಚಾರ್ಯರವರು ಸನ್ಮಾನ ಪತ್ರ ವಾಚಿಸಿದರು. ಕುಮಾರಿ ಪ್ರೀತಿ ಆಚಾರ್ಯರವರು ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಅಖಿಲ ದೇವಾಡಿಗರವರು ಕಾರ್ಯಕ್ರಮ ನಿರೂಪಿಸಿ ಚೆಂಡೆ ಬಳಗದ ಕಾರ್ಯದರ್ಶಿ ಉದಯ ದೇವಾಡಿಗರವರು ಧನ್ಯವಾದ ನೀಡಿದರು.