ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಕಾರು ಢಿಕ್ಕಿಯಾಗಿ ಮೃತಪಟ್ಟ ಅಪರಿಚಿತ ವ್ಯಕ್ತಿ

Posted On: 24-08-2021 08:10PM

ಪಡುಬಿದ್ರಿ : ಅಪರಿಚಿತ ಭಿಕ್ಷುಕರೋರ್ವರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಬೀಡು ಬಳಿ ಸೋಮವಾರ ರಾತ್ರಿ ಘಟಿಸಿದೆ.

ಸುಮಾರು ೩೫-೪೦ರ ಹರೆಯದ ವ್ಯಕ್ತಿ ಈ ಪರಿಸರದಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಕಾರು ಉಡುಪಿಯಿಂದ ಮಂಗಳೂರಿನತ್ತ ಹೋಗುತ್ತಿದ್ದು ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ.

ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಪಡುಬಿದ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.