ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯುವತಿಗೆ ಚೂರಿಯಿಂದ ಇರಿದು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

Posted On: 30-08-2021 06:50PM

ಉಡುಪಿ :ಉಡುಪಿಯ ಸಂತೆಕಟ್ಟೆ ಆಶೀರ್ವಾದ್ ಚಿತ್ರಮಂದಿರದ ಬಳಿ ಜೋಡಿಯೊಂದು ಪರಸ್ಪರ ವಾಗ್ವಾದಕ್ಕಿಳಿದು ಯುವಕನು ಯುವತಿಗೆ ಚೂರಿಯಿಂದ ಇರಿದು ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಇಬ್ಬರೂ ಬೇರೆ ಬೇರೆ ವಾಹನದಲ್ಲಿ ಆಗಮಿಸಿದ್ದು, ಇರ್ವರಲ್ಲಿ ವಾಗ್ವಾದ ಬೆಳೆದು ಈ ಘಟನೆ ಸಂಭವಿಸಿದೆ.

ಇದೊಂದು ಏಕಮುಖ ಪ್ರೀತಿಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳೀಯರು ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.