ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುಂದಾಪುರ : ಸಾಮಾಜಿಕ ಜಾಲತಾಣದಲ್ಲಿ ನಾರಾಯಣಗುರುಗಳ ಬಗ್ಗೆ ಅವಹೇಳನಗೈದ ವ್ಯಕ್ತಿಯ ವಿರುದ್ಧ ದೂರು ದಾಖಲು

Posted On: 07-09-2021 10:27PM

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ವ್ಯಕ್ತಿಯೋರ್ವರ ಮೇಲೆ ಕಿರಣ್ ಪೂಜಾರಿ ಎಂಬುವವರು ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಕುಂಭಾಶಿ ಮೂಲದ ಪತ್ರಿಕೆಯ ಸಂಪಾದಕರೋರ್ವರು ಸರ್ವರೂ ಸಮಾನರು ಎಂದು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದರು. ಇದರ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶವು ವ್ಯಕ್ತವಾಗಿತ್ತು. ಆದರೆ ಇದೀಗ ಅಂತಹ ಪೋಸ್ಟ್ ಹಾಕಿದ ವ್ಯಕ್ತಿಯ ಮೇಲೆ ಕಾನೂನು ಕ್ರಮಕ್ಕಾಗಿ ದೂರುದಾಖಲಾಗಿದೆ ಮತ್ತು ಆ ವ್ಯಕ್ತಿ ನಾರಾಯಣಗುರುಗಳ ಪ್ರತಿಮೆಯ ಮುಂದೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.