ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ

Posted On: 18-09-2021 11:09AM

ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಕೆ ಎಮ್ ಸಿ ಮಣಿಪಾಲ ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ ಹಾಗೂ ಆರೋಗ್ಯ ಮಾಹಿತಿ ಶಿಬಿರದಲ್ಲಿ ಕೆ ಎಮ್ ಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಾರ್ವಜನಿಕರಿಗೆ ಉಚಿತವಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಸೇವಾ ಕಾರ್ಯ ಶ್ಲಾಘನೀಯ.

ಆರೋಗ್ಯ ಕ್ಷೇತ್ರದಲ್ಲಿ ಇವರು ನೀಡುತ್ತಿರುವ ಕೊಡುಗೆ ಅಪಾರ. ಇಂದು ಸರಕಾದ ಎಲ್ಲ ಸವಲತ್ತುಗಳನ್ನು, ಯೋಜನೆಗಳನ್ನು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒದಗಿಸುವಲ್ಲಿ ಮತ್ತು ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಸಂಸ್ಕಾರವನ್ನು ನೀಡುತ್ತಿರುವ ಅಂಗನವಾಡಿ ಕಾರ್ಯಕರ್ತೆಗೆ ಸಮ್ಮಾನಿಸಿ ಗೌರವ ಸಲ್ಲಿಸಿರುವುದು ಬಹಳ ಉತ್ತಮವಾದುದು ಎಂದು ಕಾಪು ಬಿಜೆಪಿ ಕಾರ್ಯ ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಅಖಿಲಾ, ಪುರಸಭಾ ಮಾಜಿ ಸದಸ್ಯರಾದ ಗುಲಾಬಿ ಪಾಲನ್, ಡಾ.ವರ್ಷ, ಉದ್ಯಮಿ ಸಮಾಜಸೇವಕರಾದ ಪ್ರಸಾದ್ ಶೆಣೈ ಕಾಪು, ರೊಟೇರಿಯನ್ ಜೇಮ್ಸ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ನೀಲಾವತಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ಆರೋಗ್ಯ ಮಾಹಿತಿ ನೀಡಲಾಯಿತು.