ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ ಬಾಲಕರ ವಸತಿ ನಿಲಯ ಭೇಟಿ

Posted On: 19-09-2021 04:56PM

ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಇಂದು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ ಆರ್ಥಿಕ ಅಶಕ್ತ ಬಾಲಕರ ಉಚಿತ ವಸತಿ ನಿಲಯಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಲ್ಲಿನ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿಗಳನ್ನು ನೀಡಲಾಯಿತು.

ಈ ಕಾರ್ಯಕ್ರಮವನ್ನು ಆಸರೆ ಸಂಸ್ಥೆಯ ಸ್ಥಾಪಕಧ್ಯಕ್ಷರಾದ ಡಾ. ಕೀರ್ತಿ ಪಾಲನ್ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಆಸರೆ ತಂಡದ ಕೋಷಧಿಕಾರಿ ಜಗದೀಶ್ ಬಂಟಕಲ್, ವಿಜಯ ಬಾಲನಿಕೇತನ ದ ಉಸ್ತುವಾರಿ ಜಯರಾಮ್ ನೈರಿ ಹಾಗೂ ಸೌಂದರ್ಯ ಟೀಚರ್ ಉಪಸ್ಥಿತರಿದ್ದರು.