ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಪತ್ಬಾಂಧವ ರಿಕ್ಷಾ ಚಾಲಕ - ಯತೀಶ್ ಆಚಾರ್ಯ

Posted On: 20-09-2021 10:23PM

ಮಂಗಳೂರು : ರಾತ್ರಿ ಸುಮಾರು 12 ಘಂಟೆ ವೇಳೆ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿದಾಗ ಮನೆಯವರು ಕುಪ್ಪೆಪದವಿನಲ್ಲಿ ರಿಕ್ಷಾ ಚಾಲಕರಾಗಿರುವ ಯತೀಶ್ ಆಚಾರ್ಯ ಅವರಿಗೆ ಕರೆ ಮಾಡಿದಾಗ ಕೂಡಲೇ ಧಾವಿಸಿ ಗರ್ಭಿಣಿ ಮಹಿಳೆಯನ್ನು ಬಹಳ ಜಾಗ್ರತೆಯಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು. ಆಸ್ಪತ್ರೆಗೆ ದಾಖಲಾದ ಕೆಲವು ಘಂಟೆಗಳ ನಂತರ ಹೆರಿಗೆಯಾಯಿತು. ತಾಯಿ ಮಗು ಆರೋಗ್ಯವಾಗಿದ್ದಾರೆ. ಇವರ ನಿಸ್ವಾರ್ಥ ಸೇವೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.