ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರಗಳ ಧ್ವಂಸವನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

Posted On: 29-09-2021 11:31PM

ಪಡುಬಿದ್ರಿ : ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಜಿಲ್ಲಾಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರಕಾರದಿಂದ ರಾಜ್ಯ ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರಗಳ ಧ್ವಂಸವನ್ನು ವಿರೋಧಿಸಿ ಪಡುಬಿದ್ರಿಯಲ್ಲಿ ಸಂಜೆ ಬ್ರಹ್ಮಬೈದರ್ಕಳ ಗರಡಿ ಕಣ್ಣಂಗಾರ್ ಬಳಿಯಿಂದ ಪಡುಬಿದ್ರಿ ಪೇಟೆ ಬಸ್‌ನಿಲ್ದಾಣದವರೆಗೆ ಪಂಜಿನ ಮೆರವಣಿಗೆಯು ನಡೆಯಿತು.

ಈ ಸಂದರ್ಭ ಮಾಜಿ‌ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ವೈ. ಸುಕುಮಾರ್, ದೀಪಕ್ ಕೋಟ್ಯಾನ್, ನವೀನ್ ಚಂದ್ರ ಶೆಟ್ಟಿ, ರಮೀಝ್ ಪಡುಬಿದ್ರಿ, ಕರುಣಾಕರ್ ಪೂಜಾರಿ, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.