ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಸರ್ಕಾರ ಆಡಳಿತದಲ್ಲಿದ್ದರೂ, ತಮ್ಮ ಕ್ಷೇತ್ರವನ್ನು ಅಭಿವೃದ್ಧಿ ಮಾಡದವರಿಂದ ಹೆಚ್ಚೇನೂ ನಿರೀಕ್ಷಿಸಲು ಸಾಧ್ಯವಿಲ್ಲ - ರಮೀಜ್ ಹುಸೇನ್

Posted On: 05-10-2021 06:01PM

ಮಾಜಿ ಶಾಸಕರಾದ ವಿನಯಕುಮಾರ್ ಸೊರಕೆಯವರು ಕಾಪು ಕ್ಷೇತ್ರದ ಶಾಸಕರಾಗಿದ್ದ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಭಿವೃದ್ಧಿಯಲ್ಲಿ ಉತ್ತುಂಗದ ಶಿಖರದಲ್ಲಿತ್ತು. ಈ ಸಂದರ್ಭದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ತಮ್ಮದೇ ಸಾಧನೆ ಎಂದು ಬಿಂಬಿಸುವುದರಲ್ಲಿ ಈಗಿನ ಶಾಸಕರು ಬ್ಯುಸಿಯಾಗಿದ್ದಾರೆ. ಯಾವುದೇ ಒಂದು ಆಡಳಿತ ಪಕ್ಷ ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾದಾಗ, ಅಥವಾ ಆ ಕ್ಷೇತ್ರ ಅಭಿವೃದ್ಧಿಯಲ್ಲಿ ತೀರ ಹಿಂದುಳಿಯುವಾಗ, ಅಂತಹಾ ಸಂಧರ್ಭದಲ್ಲಿ ವಿರೋಧಪಕ್ಷಗಳು ರಸ್ತೆಗಿಳಿದು ಪ್ರತಿಭಟಿಸುವುದು ಅನಿವಾರ್ಯ. ಇದೀಗ ಬಿಜೆಪಿ ಸರ್ಕಾರ ಸಂಪೂರ್ಣ ನಿಷ್ಕ್ರಿಯ ವಾಗಿದೆ, ಆಡಳಿತ ಯಂತ್ರ ತುಕ್ಕು ಹಿಡಿದಿದೆ. ಈ ಸಂಧರ್ಭದಲ್ಲಿ ರಾಜ್ಯದ ಬಹುತೇಕ ಕಡೆ ಕಾಂಗ್ರೆಸ್ ಪಕ್ಷ ಬಿಜೆಪಿಯ ಸುಳ್ಳಿನ ಸರಮಾಲೆ, ನಕಲಿ ಹಿಂದುತ್ವ, ಮೊಸಳೆ ಕಣ್ಣೀರಿನ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುತ್ತಿದೆ.

ವಿಪರೀತ ಬೆಲೆ ಏರಿಕೆ, ಜನಜೀವನ ಸಂಕಷ್ಟದಲ್ಲಿದ್ದರೂ, BPL ಕಾರ್ಡ್ ರದ್ದುಗೊಳಿಸುವತ್ತ ಗಮನ ನೀಡುತ್ತಿರುವ ಬಿಜೆಪಿ ಸರ್ಕಾರ, ತೈಲಬೆಲೆ ಏರಿಕೆ, ಬಸ್ ಪ್ರಯಾಣ ದರ ಏರಿಕೆ, ರೈತರ ಮೇಲೆ ಹಲ್ಲೆ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಪುಂಗಿ ಊದುತ್ತಾ, ಹಿಂದೂ ದೇವಾಲಯ ಹಾಗೂ ಪ್ರಾರ್ಥನಾ ಮಂದಿರ ಒಡೆದು ಹಾಕುತ್ತಾ ಇರುವ ಬಿಜೆಪಿ ಸರ್ಕಾರ, ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ, ನೈತಿಕ ಪೊಲೀಸ್ ಗಿರಿ ಎಲ್ಲವೂ ಎಗ್ಗಿಲ್ಲದೆ ನಡೆಯುವಾಗ ಅವುಗಳನ್ನು ಮೌನವಾಗಿ ಸಮರ್ಥಿಸುವ ಬಿಜೆಪಿಯ ಘಟಾನುಘಟಿ ನಾಯಕರುಗಳು, ಇವೆಲ್ಲವನ್ನೂ ಕಾಂಗ್ರೆಸ್ ಜನರಿಗೆ ಮನವರಿಕೆ ಮಾಡಿಕೊಡುತ್ತಿದೆ, ಬಿಜೆಪಿಯ ದ್ವಂದ್ವ ಮನೋಭಾವವನ್ನು ಜನರು ಕೂಡ ಅರ್ಥೈಸತೊಡಗಿದ್ದಾರೆ.

ತನ್ನ ಬಂಡವಾಳ ಬಯಲಾಗುತ್ತಿದ್ದಂತೆ, ಬಿಜೆಪಿ ನಾಯಕರಿಗೆ ತಳಮಳ ಶುರುವಾಗಿ, ದಿನಕ್ಕೊಂದು ರೀತಿಯ ಹೇಳಿಕೆ ಕೊಡುತ್ತಾ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಮೇಲೆ ಸುಖಾಸುಮ್ಮನೆ ಅಪಪ್ರಚಾರ ಮಾಡಿ, ಕೈಲಾಗದವ ಮೈಯ್ಯೆಲ್ಲಾ ಪರಚಿಕೊಂಡ ಎನ್ನುವ ಗಾದೆ ಮಾತು ಸತ್ಯ ಎಂದು ರಾಜ್ಯದ ಜನತೆಗೆ ತಿಳಿಸುತ್ತಿದ್ದಾರೆ. ಇದುವರೆಗೆ ರಾಜ್ಯ ಬಿಜೆಪಿ ನಾಯಕರಾಗಲಿ ಜಿಲ್ಲಾ ನಾಯಕರಾಗಲಿ, ಅಥವಾ ಬಿಜೆಪಿಯ ರಾಜಕಾರಣಿಗಳಾಗಲಿ, ರಾಜ್ಯ ಸರ್ಕಾರ ಪ್ರಾಯೋಜಿತ ದೇವಸ್ಥಾನ ಉರುಳಿಸುವ ಯೋಜನೆ ವಿರುದ್ಧ ಒಂದೇ ಒಂದು ಶಬ್ದ ಮಾತಾಡದೆ, ಸುಮ್ಮನಿರುವ ಉದ್ದೇಶವಾದರೂ ಏನು? ತಮ್ಮ ಉದ್ದೇಶ ಸಾಧನೆಗೆ ಧರ್ಮವನ್ನು ಗುರಾಣಿಯಾಗಿ ಬಳಸಿ, ಇದೀಗ ಅಧಿಕಾರ ಸಿಕ್ಕಾಗ ತಾನು ಪಕ್ಕಾ ಹಿಂದೂ ವಿರೋಧಿ ಎಂದು ಸಾಬೀತುಪಡಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷವು ಎಂದೆಂದಿಗೂ ಹೋರಾಟ ಮಾಡುತ್ತೆ. ಅಭಿವೃದ್ಧಿ ವಿಷಯದಲ್ಲಿ ಮಾತಾಡುವುದನ್ನು ಈ ಬಿಜೆಪಿ ಸರ್ಕಾರ ಮರೆತೇಬಿಟ್ಟಿದೆ. ಆಡಳಿತ ಪಕ್ಷವನ್ನು ವಿರೋಧ ಪಕ್ಷ ಪ್ರಶ್ನಿಸುವುದು ರಾಜಕೀಯ ಧರ್ಮ, ಅದನ್ನು ಕಾಂಗ್ರೆಸ್ ಪಾಲಿಸುತ್ತಿದ್ದೆ, ಮಾನ್ಯ ಸೊರಕೆಯವರು ಜನನಾಯಕರಾಗಿ ಪ್ರಶ್ನಿಸುವಾಗ, ಅದಕ್ಕೆ ಯಾವುದೇ ಉತ್ತರ ಕೊಡದೆ, ವಿಷಯಾಂತರ ಮಾಡಿ ತನ್ನ IT cell ಮುಖಾಂತರ ಸಾಮಾಜಿಕ ಜಾಲತಾಣಗಳಲ್ಲಿ ಸೊರಕೆಯವರ ಬಗ್ಗೆ ಅಪಪ್ರಚಾರ ಮಾಡಿಸುವ ಬಿಜೆಪಿ ನಾಯಕರಲ್ಲಿ ನಮ್ಮದೊಂದು ಮನವಿ.

ನಿಮ್ಮಲ್ಲಿ ಇನ್ನೂ ಕೂಡ ಅಭಿವೃದ್ಧಿಯ ಮನೋಭಾವ ಇದ್ದರೆ, ತಕ್ಷಣ ಕಾಪು ಕ್ಷೇತ್ರದ ಅಭಿವೃದ್ಧಿಗೆ ಹಣಬಿಡುಗಡೆ ಮಾಡಿ. ಹದೆಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಿ, ಹಕ್ಕುಪತ್ರ ವಂಚಿತರಿಗೆ ಹಕ್ಕುಪತ್ರ ನೀಡಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಮರುಪ್ರಾರಂಭಿಸಿ, ಅದು ಬಿಟ್ಟು ಹಿಂದಿನ ಸರ್ಕಾರದ ಅವಧಿಗಳಲ್ಲಿ ಆದ ಕಾಮಗಾರಿಗಳನ್ನ ಉದ್ಘಾಟನೆ ಮಾಡಿ ಹೆಸರು ಬದಲಾಯಿಸಿ ತಮ್ಮದೇ ಸಾಧನೆ ಎಂದು ಬಿಂಬಿಸಿ, ಇದ್ದ ಅಲ್ಪಸ್ವಲ್ಪ ಗೌರವವನ್ನು ಕಳೆದುಕೊಳ್ಳಬೇಡಿ ಎಂದು ಯುವ ಕಾಂಗ್ರೆಸ್ ಕಾಪು ಬ್ಲಾಕ್ ( ದಕ್ಷಿಣ)ನ ಅಧ್ಯಕ್ಷರಾದ ರಮೀಜ್ ಹುಸೇನ್ ಆಗ್ರಹಿಸಿದ್ದಾರೆ.