ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಟಕಲ್ಲು : ಗುರುವಂದನಾ ಕಾರ್ಯಕ್ರಮ

Posted On: 09-10-2021 04:59PM

ಕಾಪು‌ : ವಿಕಾಸ ಸೇವಾ ಸಮಿತಿ ಮತ್ತು ಮಹಿಳಾ ಬಳಗ 92ನೇ ಹೇರೂರು ಇದರ ವತಿಯಿಂದ ಚಂಡೆ ತರಬೇತುಗೊಂಡ ಸದಸ್ಯರ ಗುರುವಂದನಾ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಮಾಧವ ಆಚಾರ್ಯರು ತಮ್ಮನ್ನು ಹೀಯಾಳಿಸುವವರನ್ನು ಬದಿಗಿಟ್ಟು ನಮ್ಮತನವನ್ನು ನಾವು ಬೆಳೆಸಿಕೊಂಡಲ್ಲಿ ಆತ್ಮಶಕ್ತಿ ಜಾಗ್ರತವಾಗುವುದರೊಂದಿಗೆ ನಾವು ನಿಶ್ಚಿತ ಗುರಿಯನ್ನು ಸಾಧಿಸಬಹುದು ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಸಭಾಂಗಣದಲ್ಲಿ ನಡೆದ ಗುರುಗಳಾದ ಪಂಜಿಮಾರು ಶ್ರೀ ರಾಘವೇಂದ್ರ ಭಟ್ ರವರ ಗುರುವಂದನಾ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಪು ವಿಶ್ವಬ್ರಾಹ್ಮಣ ಯುವ ಸಂಘಟನೆಯ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯರು ದೀಪ ಪ್ರಜ್ವಲನಗೊಳಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಂಟಕಲ್ಲು ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮುರಳೀಧರ ಆಚಾರ್ಯರು ಸಾಂಘಿಕ ಪ್ರಯತ್ನದಿಂದ ಅಸಾಧ್ಯವಾದುದನ್ನು ಸಾಧಿಸಬಹುದು ಮೊದಲಾಗಿ ನಾವು ಒಗ್ಗಟ್ಟನ್ನು ಪ್ರತಿಪಾದಿಸಬೇಕು ಎಂದು ಶುಭಹಾರೈಸಿದರು.

ಗುರುವಂದನೆ ಸ್ವೀಕರಿಸಿದ ರಾಘವೇಂದ್ರ ಭಟ್ ರವರು ಆಶೀರ್ವದಿಸಿದರು. ಮಹಿಳಾ ಬಳಗದ ಗೌರವ ಅಧ್ಯಕ್ಷೆ ಪ್ರತಿಭಾ ಆಚಾರ್ಯ, ಅಧ್ಯಕ್ಷೆ ವಿಜಯ ವಿಘ್ನೇಶ್ವರ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿ, ಪೂರ್ಣಿಮಾ ರಮೇಶ್ ಆಚಾರ್ಯ ಪರಿಚಯಿಸಿ, ವಿಶಾಲ ಗಣಪತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಮಂಜುಳಾ ಗಣೇಶ್ ಆಚಾರ್ಯ ವಂದಿಸಿದರು.