ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಅ.13 : ಕಾಪು ಮಾರಿಗುಡಿಗೆ ಸಿಎಂ ಭೇಟಿ ಹಿನ್ನಲೆಯಲ್ಲಿ ಭಕ್ತರ ಭೇಟಿಯ ಸಮಯ ಮಾರ್ಪಾಡು

Posted On: 11-10-2021 09:28PM

ಕಾಪು : ಸಮಗ್ರ ಜೀರ್ಣೋದ್ಧಾರದ ಸಡಗರದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅ.13ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದು, ಆ ಹಿನ್ನೆಲೆಯಲ್ಲಿ‌ ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ಭಕ್ತಾಧಿಗಳ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಭಕ್ತಾಧಿಗಳು ಸಹಕರಿಸುವಂತೆ ದೇಗುಲದ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.