ಉಡುಪಿ, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 11 ಗಂಟೆಗೆ ಅದಮಾರು ನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ, ಮಧ್ಯಾಹ್ನ 12.30 ಕ್ಕೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ, 1 ಗಂಟೆಗೆ ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನ್ಯೂ ಸೈನ್ಸ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ಮತ್ತ ಕಂಪ್ಯೂಟರ್ ಸೈನ್ಸ್ ಲ್ಯಾಬೋರೇಟರಿ ಉದ್ಘಾಟನೆ. 2.30 ಕ್ಕೆ ಕುಂತಲ ನಗರದಲ್ಲಿ ಸಮುದಾಯ ಭವನ ಮತ್ತು ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ ಹಾಗೂ ಲೋಕೋಪಯೋಗಿ ಇಲಾಖೆವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.