ರೋಟರಿ ಸೈಬ್ರಕಟ್ಟೆಯ ಅಣ್ಣಯ್ಯದಾಸ್ ದಂಪತಿಯಿಂದ ಸ.ಹಿ.ಪ್ರಾ.ಶಾಲೆ ಸೈಬ್ರಕಟ್ಟೆಗೆ ಅಗತ್ಯ ವಸ್ತು ಹಸ್ತಾಂತರ
Posted On:
15-10-2021 09:01PM
ಉಡುಪಿ : ರೋಟರಿ ಸೈಬ್ರಕಟ್ಟೆಯ ಕಾರ್ಯದರ್ಶಿ ಅಣ್ಣಯ್ಯದಾಸ್ ದಂಪತಿಗಳ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ಕೊಡುಗೆಯಾದ ನಲಿ ಕಲಿ ಪರಿಕರ ಗಳ ಜೋಡಣೆಗೆ ಅಗತ್ಯತೆ ಇರುವ ಕಪಾಟು ಸ.ಹಿ.ಪ್ರಾ.ಶಾಲೆ ಸೈಬ್ರಕಟ್ಟೆಗೆ ಹಸ್ತಾಂತರ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಮಾಡಲಾಯಿತು.
ವಿಶೇಷ ಅತಿಥಿ ಮಾಜಿ ಸಹಾಯಕ ಗವರ್ನರ್ ಮಹೇಶ್ ಕುಮಾರ್ ಅವರು ಮುಖ್ಯ ಶಿಕ್ಷಕ ಸತೀಶ್ಚಂದ್ರ ಅವರಿಗೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಅಣ್ಣಯ್ಯದಾಸ್ ಅವರು ರೋಟರಿ ಕ್ಲಬ್ ಸೈಬ್ರಕಟ್ಟೆಗೆ ದೊಡ್ಡ ಆಸ್ತಿ, ಅಲ್ಲದೆ ರೋಟರಿ ಮುಖಾಂತರ ಹಲವಾರು ಕೊಡುಗೆ ಗಳನ್ನು ಈ ಸಮಾಜಕ್ಕೆ ನೀಡಿದ್ದಾರೆ. ಹಾಗೆಯೇ ಈ ವರ್ಷ ರೋಟರಿ ಸೈಬ್ರಕಟ್ಟೆ ಶ್ರೇಷ್ಠ ಸೇವೆ ಹಾಗೂ ಹೆಚ್ಚೆಚ್ಚು ಪ್ರಾಜೆಕ್ಟ್ ಗಳ ಮೂಲಕ ವಲಯ ಹಾಗೂ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ ಅಂತ ಹೇಳಿದರು.
ಇದೆ ಸಂದರ್ಭದಲ್ಲಿ ಶಾಲೆಯಿಂದ ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ಮತ್ತು ಇಂದಿನ ಕೊಡುಗೆ ನೀಡಿದ ಅಣ್ಣಯ್ಯ ದಾಸ್ ಅವರನ್ನು ಸನ್ಮಾನ ಮಾಡಲಾಯಿತು.ಪ್ರಸಾದ್ ಭಟ್ ಅವರು ಮಾತನಾಡಿ ಸೈಬ್ರಕಟ್ಟೆ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿಯೇ ಕನ್ನಡ ಮಾದ್ಯಮದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು ಹಳೆ ವಿದ್ಯಾರ್ಥಿಗಳ ಅತ್ಯುನ್ನತ ಕೊಡುಗೆ ಗಳಿಂದ ಉತ್ತಮ ಅಭಿವೃದ್ದಿ ಹೊಂದುತ್ತಿದ್ದು ರೋಟರಿ ಕೂಡ ಕೈ ಜೋಡಿಸುತ್ತೆ ಅಂತ ಹೇಳಿದರು.
ವಲಯ ಸೇನಾನಿ ವಿಜಯಕುಮಾರ್ ಶೆಟ್ಟಿ, SDMC ಅಧ್ಯಕ್ಷ ಪುರುಷೋತ್ತಮ ದೇವಾಡಿಗ, ರವೀಂದ್ರನಾಥ್ ಕಿಣಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಪ್ರಭು, ನೀಲಕಂಠ ರಾವ್, ಗಣೇಶ್ ನಾಯಕ್, ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು.