ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಲ್ ಇಂಡಿಯಾ ಫೆಡರೇಷನ್ ಆಫ್ ಮಾಸ್ಟರ್ ಪ್ರಿಂಟರ್ಸ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ, ಬೆಂಗಳೂರು ಕ್ಲಸ್ಟರ್ ನ ಅಧ್ಯಕ್ಷ ಸಿ ಆರ್ ಜನಾರ್ಧನ್ ಉಡುಪಿ ಭೇಟಿ

Posted On: 17-10-2021 11:15AM

ಉಡುಪಿ : ಆಲ್ ಇಂಡಿಯಾ ಫೆಡರೇಷನ್ ಆಫ್ ಮಾಸ್ಟರ್ ಪ್ರಿಂಟರ್ಸ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು ಹಾಗೂ ಬೆಂಗಳೂರು ಕ್ಲಸ್ಟರ್ ನ ಅಧ್ಯಕ್ಷರು ಸಿ ಆರ್ ಜನಾರ್ಧನ್ ರವರು ಉಡುಪಿಗೆ ಆಗಮಿಸಿದಾಗ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ದ ವತಿಯಿಂದ ಸ್ವಾಗತಿಸಿ, ಗೌರವಿಸಲಾಯಿತು.

ಈ ಸಂದರ್ಭ ಪ್ರಿಂಟಿಂಗ್ ಉದ್ಯಮದ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಲಾಯಿತು. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದ ಮುದ್ರಣ ಕಾರ್ಯಾಗಾರವನ್ನು ಉಡುಪಿಯಲ್ಲಿ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದರು ಹಾಗೂ ರಾಜ್ಯ ಮಟ್ಟದಲ್ಲಿ ಸಂಘಟನೆಯನ್ನು ಬಲ ಪಡಿಸುವ ಬಗ್ಗೆ ಸಮನ್ವಯ ಸಮಿತಿ ಗೆ ಸಂಪೂರ್ಣ ಸಹಕಾರ ವನ್ನು ನೀಡುತ್ತೇನೆ ಎಂದು ಸಿ ಆರ್ ಜನಾರ್ಧನ್ ರವರು ತಿಳಿಸಿದರು.

ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಎಮ್ ಮಹೇಶ್ ಕುಮಾರ್, ಕಾರ್ಯದರ್ಶಿ ಮನೋಜ್ ಕಡಬ ಉಪಸ್ಥಿತರಿದ್ದರು.