ಕಟಪಾಡಿ: ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಪ್ರತಿ ಸೋಮವಾರ ಹಾಗೂ ಶುಕ್ರವಾರಗಳಂದು ನಡೆಯುತ್ತಿದ್ದ ಅನ್ನಸಂತರ್ಪಣೆಯನ್ನು ಅ.18ರಿಂದ ಪುನರಾರಂಭಿಸಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ಈ ಸೇವೆ ನಿರಂತರವಾಗಿ ನಡೆಯಲಿದೆ.