ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ ಜರಿಮರಿ ಯ ಸದಸ್ಯರಿಂದ ತುಳುನಾಡಿನ ಪ್ರಸಿದ್ಧ ಕ್ಷೇತ್ರಗಳಲ್ಲಿ ಭಜನೆ ಕಾರ್ಯಕ್ರಮ.

Posted On: 21-10-2021 01:29PM

ಕಾಪು : ಮುಂಬಯಿಯ ಪ್ರಸಿದ್ಧ ಭಜನ ಮಂಡಳಿಗಳಲ್ಲಿ ಒಂದಾದ ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿಯ ಸದಸ್ಯರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 21 ರ ತನಕ ಭಜನ ಸಂಕೀರ್ತನ ಕಾರ್ಯಕ್ರಮವನ್ನು ನಡೆಸಿ ಕೊಟ್ಟರು.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂಡ್ಕೂರ್, ಕಾರ್ಕಳ, ಶ್ರೀ ಅಖಿಲೇಶ್ವರ ದೇವಸ್ಥಾನ ಪೊಳಲಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಅಬ್ಬಗ ಧಾರಗ ಶ್ರೀ ಬ್ರಹ್ಮಲಿಂಗೇಶ್ವರ ಕ್ಷೇತ್ರ ಕವಾತರು, ಶ್ರೀ ಆದಿ ಮಾರಿಯಮ್ಮ ದೇವಸ್ಥಾನ ಕೋಟೆಮನೆ ಕಾಪು, ಶ್ರೀ ಹೊಸ ಮಾರಿಗುಡಿ ಕಾಪು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು, ಶ್ರೀ ಭಗವತಿ ಕ್ಷೇತ್ರ ಸಸಿಹಿತ್ಲು, ಶ್ರೀ ಮಹಾಗಣಪತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡುಬಿದ್ರಿ, ಶ್ರೀ ಕೃಷ್ಣ ಮಠ ಉಡುಪಿ, ಶ್ರೀ ಆದಿ ಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲ್ಪಾಡಿ ಉಡುಪಿ, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಲಿಮಾರು ಮುಂತಾದ ಪುಣ್ಯಕ್ಷೇತ್ರ ಗಳಲ್ಲಿ ಭಜನ ಕಾರ್ಯಕ್ರಮವನ್ನು ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ನಡೆಸಿಕೊಟ್ಟರು.

ಕಲಿಯುಗದಲ್ಲಿ ದೇವರನ್ನು ಒಲಿಸುವ ಸುಲಭ ಸಾಧನ ವೆಂಬ ಜ್ಞಾನಿಗಳ ವಾಣಿಯಂತೆ ಸತತ 8 ವರ್ಷ ಶ್ರೀ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಹರಿನಾಮ ಸಂಕೀರ್ತನೆ ಯನ್ನು ನಡೆಸಿರುವ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದ ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ ಜರಿಮರಿಯ ಸದಸ್ಯರು ಮುಂಬಯಿ ಮಹಾನಗರ ಮಾತ್ರವಲ್ಲದೆ ದೇಶದ ಹಲವಾರು ಪುಣ್ಯಕ್ಷೇತ್ರಗಳಲ್ಲಿ ಭಜನ ಕಾರ್ಯಕ್ರಮ ನಡೆಸಿ ಕೊಟ್ಟಿರುವರು. ಇದೀಗ ಭಜನೆಯಲ್ಲಿ ಯುವ ಪೀಳಿಗೆ ಆಸಕ್ತಿ ತೋರಲೆಂದು ಉಚಿತವಾಗಿ ಮನೆ ಮನೆ ಭಜನೆ ಸೇವೆಯನ್ನು ಕೂಡ ಮಾಡುತ್ತಿದ್ದು, ಇದೀಗ ತುಳುನಾಡಿನ ಉಭಯ ಜಿಲ್ಲೆಗಳ ಹಲವಾರು ಕ್ಷೇತ್ರಗಳಲ್ಲಿ ಭಜನ ಕಾರ್ಯಕ್ರಮವನ್ನು ಭಕ್ತಿ ಭಾವದಿಂದ ನಡೆಸಿಕೊಟ್ಟಿರುವರು.