ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ್ ವಸ್ತುಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ಜೋರಾಗಿದೆ.
ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲವತ್ತತೆ ಯ ಭೂಮಿ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇನ್ನು ಮುಂದಾದರು ನಾಗರಿಕ ಪ್ರಪಂಚ ಇತ್ತ ಗಮನ ಹರಿಸಬೇಕಾಗಿದೆ. ಇದಕ್ಕೆ ಸಂಬಂದಪಟ್ಟವರು ಸೂಕ್ತ ಕ್ರಮ ಕೈಗೊಂಡು ಪರಿಸರ ಮಾಲಿನ್ಯ ತಡೆಗಟುವಲ್ಲಿ ಶ್ರಮಿಸಬೇಕಾಗಿದೆ ಎಂದು ಸಂತ ಮೇರಿ ಕಾಲೇಜು, ಶಿರ್ವದ ಊಪನ್ಯಾಸಕರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.