ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ತಹಶಿಲ್ದಾರರಿಗೆ ಮನವಿ

Posted On: 23-10-2021 12:23PM

ಕಾರ್ಕಳ : ವಿದ್ಯಾರ್ಥಿಗಳ ಹಲವು ಶೈಕ್ಷಣಿಕ ಸಮಸ್ಯೆಗಳಾದ ವಸತಿನಿಲಯ, ವಿದ್ಯಾರ್ಥಿ ವೇತನ, ಸರಿಯಾದ ಸಾರಿಗೆ ವ್ಯವಸ್ಥೆ ಕಲ್ಪಿಸಿ ಆದಷ್ಟು ಶೀಘ್ರದಲ್ಲಿ ಪರಿಹರಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕಿನಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ತಾಲೂಕು ಸಂಚಾಲಕ ಯುಕೇಶ್ ಉಜಿರೆ, ನಗರ ಸಹಕಾರ್ಯದರ್ಶಿ ಶಿವರುದ್ರ ಪಾಟೀಲ್, ಹಾಗೂ ಕಾಲೇಜು ಘಟಕ ಕಾರ್ಯದರ್ಶಿ ಸುಮಂತ್ ಪೂಜಾರಿ, ನಗರ ವಿದ್ಯಾರ್ಥಿನಿ ಸಹ ಪ್ರಮುಖ್ ಕಾಂತಿಶ್ರೀ ಹಾಗೂ ಪ್ರಮುಖ ಕಾರ್ಯಕರ್ತರಾದ ಗೌತಮ್ ಪೂಜಾರಿ, ಸುಶಾನ್, ಸನತ್ ಉಪಸ್ಥಿತರಿದ್ದರು.