ಉಡುಪಿ : ಸೈಬ್ರಕಟ್ಟೆ ರೋಟರಿ ಮತ್ತು ಇಂಟರ್ಯಾಕ್ಟ್ ಕ್ಲಬ್ MGHS ಸೈಬ್ರಕಟ್ಟೆ ವತಿಯಿಂದ ಜಂಟಿಯಾಗಿ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯಲ್ಲಿ ತಾಯಿ ಭುವನೇಶ್ವರಿ ದೇವಿಯ ಚಿತ್ರಕ್ಕೆ ಪುಷ್ಪ ಅರ್ಚನೆಯ ಮೂಲಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ವಲಯ 3 ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ , ಶಾಲಾ ಮುಖ್ಯಶಿಕ್ಷಕ ಸತೀಶ್ ನಾಯ್ಕ್ ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವೀಂದ್ರನಾಥ್ ಶೆಟ್ಟಿ, ಸಮವಸ್ತ್ರ ಕೊಡುಗೆಯ ಪ್ರಾಯೋಜಕರು ಸಂದೀಪ್ ಶೆಟ್ಟಿ, ಇಂಟರ್ಯಾಕ್ಟ್ ಅಧ್ಯಕ್ಷೆ ಕುಮಾರಿ ಮಾನ್ಯ ಹಾಗೂ ವಿದ್ಯಾರ್ಥಿಗಳು, ರೋಟರಿ ಮಿತ್ರರು ಉಪಸ್ಥಿತರಿದ್ದರು.