ಅದಮಾರು : ಅಪರಾಧ ತಡೆ ಮಾಸಾಚರಣೆ 2021 ಹಾಗೂ 112 ಜಾಗೃತಿ ಕಾರ್ಯಕ್ರಮ
Posted On:
24-12-2021 07:43AM
ಅದಮಾರು: ತೆಂಕ ಎರ್ಮಾಳ್ ಗ್ರಾಮದ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ಪೋಲಿಸ್ ಇಲಾಖೆ ಮತ್ತು ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಅಪರಾಧ ತಡೆ ಮಾಸಾಚರಣೆ 2021 ಹಾಗೂ 112 ERSS ಜಾಗೃತಿ ಮೂಡಿಸುವ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ಪಿಎಸ್ ಐ (ಕಾನೂನು ಸುವ್ಯವಸ್ಥೆ & ಸಂಚಾರ ) ಹಾಗೂ ಜಯ ಕೆ ಪಿಎಸ್ ಐ (ತನಿಖೆ) ರವರು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಪಾಲನೆ, ಸೈಬರ್ ಕ್ರೈಂ, 112 ಬಗ್ಗೆ ಜಾಗೃತಿ, NDPS ಮತ್ತು COVID-19 ಮಾರ್ಗ ಸೂಚಿಗಳನ್ನು ಪಾಲಿಸಿ ಅಪರಾಧವನ್ನು ತಡೆಯುವಲ್ಲಿ ಜಾಗೃತರಾಗಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿ, ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಂದರ್ಭ ಪಡುಬಿದ್ರಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್, ರೋಟರಿ ಪದಾಧಿಕಾರಿಗಳು, ಪೋಲಿಸ್ ಸಿಬ್ಬಂದಿಗಳು, ಪೂರ್ಣ ಪ್ರಜ್ಞಾ ವಿದ್ಯಾಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.