ಮುಂಬೈ ಶಿವಸೇನಾ ಮುಖಂಡ ಚಂದ್ರಕೃಷ್ಣ ಶೆಟ್ಟಿಯವರಿಂದ ಕಾಪು ಹೊಸ ಮಾರಿಗುಡಿ ಜೀರ್ಣೋದ್ದಾರಕ್ಕೆ 51 ಶಿಲಾ ಸೇವೆ ಸಮರ್ಪಣೆ
Posted On:
26-12-2021 05:14PM
ಕಾಪು : ಮುಂಬೈ ಶಿವಸೇನಾ ಮುಖಂಡರಾದ ಉದ್ಯಮಿ ಚಂದ್ರಕೃಷ್ಣ ಶೆಟ್ಟಿ "ಬೆರ್ಮೋಟ್ಟು" ಮಡುಂಬು, ಇನ್ನಂಜೆ ಇವರು ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರಕ್ಕೆ 51 ಶಿಲಾ ಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಣೆ ಮಾಡಿ ಕಾಪು ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳೊಂದಿಗೆ ಮಾತನಾಡಿದ ಅವರು ಕೋವಿಡ್ ಕಾರಣದಿಂದಾಗಿ ಭಕ್ತರು ಕಂಗಲಾಗಿದ್ದಾರೆ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಹೊರ ರಾಜ್ಯ ಮತ್ತು ಹೊರ ದೇಶಗಳಿಂದಲೂ ಶಿಲಾಸೇವೆಯ ಮಹಾಪೂರವೇ ಹರಿದು ಬರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಆರ್ಥಿಕ ಸಮಿತಿಯ ಶೈಲಪುತ್ರಿ ತಂಡದ ಸಂಚಾಲಕರಾದ ಲಕ್ಷ್ಮೀಶ ತಂತ್ರಿ ಕಲ್ಯಾ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.