ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಂಕರಪುರ : ಸೌಹಾರ್ದತೆ ಮೆರೆದ ಅಯ್ಯಪ್ಪ ಭಕ್ತರು

Posted On: 30-12-2021 06:20PM

ಶಿರ್ವ : ಶಂಕರಪುರ ಸೈಂಟ್ ಜಾನ್ಸ್ ಚರ್ಚಿನ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ಮುಂಬೈನ ಚಂದ್ರಹಾಸ ಗುರುಸ್ವಾಮಿ ಶಿಷ್ಯರು ಚರ್ಚಿಗೆ ಹೋಗಿ ಕ್ಯಾಂಡಲ್ ಹೊತ್ತಿಸಿ ಪ್ರಾರ್ಥಿಸಿದರು.

ಮತಾಂಧರ ಕಿಚ್ಚಿನ ನಡುವೆ ಅಯ್ಯಪ್ಪ ಭಕ್ತರು ಸೌಹಾರ್ದತೆ ಮೆರೆದಿದ್ದಾರೆ.

ಶಂಕರಪುರ ಸಾರ್ವಜನಿಕ ಅಯ್ಯಪ್ಪ ಭಕ್ತವೃಂದದ ಅಯ್ಯಪ್ಪ ಭಕ್ತರ ಮತ್ತು ಮುಂಬೈ ಚಂದ್ರಹಾಸ ಗುರುಸ್ವಾಮಿ ಶಿಷ್ಯರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.