ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎರಡು ರಾಷ್ಟ್ರೀಯ ಪಕ್ಷಗಳ ಹಣ ಬಲದಿಂದ ಕೆಲವು ಕ್ಷೇತ್ರಗಳಲ್ಲಿ ಅಲ್ಪ ಮತಗಳಿಂದ ಸೋಲು ; ಮತದಾರ ಬಾಂಧವರಿಗೆ ಧನ್ಯವಾದಗಳು : ಯೋಗೀಶ್ ವಿ. ಶೆಟ್ಟಿ

Posted On: 30-12-2021 07:14PM

ಕಾಪು : ಇಲ್ಲಿನ ಪುರಸಭಾ ಚುನಾವಣೆಯಲ್ಲಿ ಜನತಾದಳ(ಜಾತ್ಯತೀತ) 7 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು, ನಾಲ್ಕುಕಡೆ ನಾವು ಗೆಲುವಿನ ನಿರೀಕ್ಷೆಯಲ್ಲಿದ್ದೆವು, ಆದರೆ ಎರಡು ರಾಷ್ಟ್ರೀಯ ಪಕ್ಷಗಳ ಹಣ ಬಲದಿಂದ ಕೆಲವು ಕ್ಷೇತ್ರಗಳಲ್ಲಿ ಅಲ್ಪ ಮತಗಳಿಂದ ಸೋತಿದ್ದೇವೆ.

ನಮಗೆ ಆರ್ಥಿಕವಾಗಿ ಸ್ವಲ್ಪ ಕಷ್ಟವಾಯಿತು, ಕೊಂಬಗುಡ್ಡೆ ವಾರ್ಡ್ ನಲ್ಲಿ ನಾವು ಗೆಲುವು ಸಾಧಿಸಿದ್ದೇವೆ ಇದು ಪ್ರಾರಂಭ, ಯಾರು ಎಷ್ಟು ಲಘುವಾಗಿ ಮಾತನಾಡಲಿ, ನಾವು ನಮ್ಮದೇ ಆದ ರೀತಿಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸರಿಸಮಾನಾಗಿ ನಿಲ್ಲುತ್ತೇವೆ.

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ, ಕಾಪು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸ ನಮಗೆ ಬಂದಿರುತ್ತದೆ.

ಪುರಸಭಾ ಚುನಾವಣೆಯಲ್ಲಿ ಸಹಕರಿಸಿದ ಮತದಾರ ಬಾಂಧವರಿಗೆ ಧನ್ಯವಾದಗಳು ಎಂದು ಜನತಾದಳ(ಜಾತ್ಯತೀತ) ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.