ಮಂಗಳೂರು : ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರುಣ ಆಳ್ವ ARSI ಇವರು ಬೆನ್ನಟ್ಟಿ, ಆರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಶ್ಲಾಘನೀಯ ಕರ್ತವ್ಯವನ್ನು ನಿರ್ವಹಿಸಿರುವ ಹಿನ್ನೆಲೆಯಲ್ಲಿ ಪೋಲಿಸ್ ಕಮಿಷನರ್ ಶಶಿಕುಮಾರ್ ಅಭಿನಂದಿಸಿದರು.
ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಹಿಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.