ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲದ ಕುಂಜೂರು ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

Posted On: 15-01-2022 12:49PM

ಕಾಪು : ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದ ಕುಂಜೂರು ಸಮೀಪದ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದ್ದು, ರೈಲ್ವೆ ಹಳಿಯ ಸಮೀಪದಲ್ಲಿಯೇ ಈತನ ಮನೆಯಿದ್ದು, ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪಡುಬಿದ್ರಿ ಪೋಲೀಸರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ, ಛಿದ್ರ ಛಿದ್ರವಾದ ಮೃತ ಶರೀರವನ್ನು ಆಸಿಫ್ ಆಪದ್ಬಾಂಧವರವರ ತಂಡ ಕಾರ್ಯಾಚರಿಸಿ ಪಡುಬಿದ್ರಿ ಶವಾಗಾರಕ್ಕೆ ರವಾನಿಸಲಾಗಿದೆ.