ಉಚ್ಚಿಲದ ಕುಂಜೂರು ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ
Posted On:
15-01-2022 12:49PM
ಕಾಪು : ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದ ಕುಂಜೂರು ಸಮೀಪದ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದ್ದು, ರೈಲ್ವೆ ಹಳಿಯ ಸಮೀಪದಲ್ಲಿಯೇ ಈತನ ಮನೆಯಿದ್ದು, ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪಡುಬಿದ್ರಿ ಪೋಲೀಸರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ, ಛಿದ್ರ ಛಿದ್ರವಾದ ಮೃತ ಶರೀರವನ್ನು ಆಸಿಫ್ ಆಪದ್ಬಾಂಧವರವರ ತಂಡ ಕಾರ್ಯಾಚರಿಸಿ ಪಡುಬಿದ್ರಿ ಶವಾಗಾರಕ್ಕೆ ರವಾನಿಸಲಾಗಿದೆ.