ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೇಂದ್ರ ಸರಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ಕಡೆಗಣಿಸಿರುವುದು ಅವರ ಬೋಧನೆಗಳನ್ನು ಕಡೆಗಣಿಸಿದಂತೆ : ವಿನಯ್ ಕುಮಾರ್ ಸೊರಕೆ

Posted On: 16-01-2022 06:13PM

ಗಣರಾಜ್ಯೋತ್ಸವ ಪೆರೇಡಿಗೆ ಕೇರಳ ಸರಕಾರವು ಕಳುಹಿಸಿದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಡೆ ಹಿಡಿದಿರುವ ಕೇಂದ್ರದ ನಿಲುವು ಗುರುಗಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ತೋರಿಸಿದ ಅಗೌರವ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ ಜಾತಿ ಪದ್ಧತಿ ಬಲವಾಗಿ ಬೇರೂರಿದ್ದ ಸಮಯದಲ್ಲಿ ಸಮಾಜದ ಶೋಷಣೆಗೊಳಗಾದ ಜನರಿಗೆ ದೇವರ ಪಾರ್ಥನೆ ಮಾಡಲು ಹಾಗೂ ದೇವಸ್ಥಾನಕ್ಕೂ ಪ್ರವೇಶವಿಲ್ಲದ ಸಮಯದಲ್ಲಿ ಗುರೂಜಿ ಧ್ವನಿಯಾಗಿ ಆತ್ಮವಿಶ್ವಾಸ ತುಂಬಿದರು.ಅವರಲ್ಲಿ ಸಮಾನತೆಯ ಆಶಾಕಿರಣ ಬೀರಿ, ಶೋಷಣೆಗೊಳಗಾದ ಜನರಿಗೆ ಭರವಸೆ ನೀಡಿದರು.

ಒಂದೇ ಜಾತಿ,ಒಂದೇ ಮತ ಎಂಬ ವಿಶಾಲ ಸಂದೇಶ ನೀಡಿ, ಮಹಾ ಮಾನವತಾವಾದಿಯಾದ ಗುರುಗಳ ಸ್ತಬ್ದ ಚಿತ್ರವನ್ನು ಕಡೆಗಣಿಸಿರುವುದು ಅವರ ಬೋಧನೆಗಳನ್ನು ಕೇಂದ್ರ ಸರಕಾರ ಕಡೆಗಣಿಸಿದಂತಿದೆ.ಗುರುಗಳನ್ನು ಭಕ್ತಿಯಿಂದ ಆರಾಧಿಸುವ ಬಿಜೆಪಿ ನಾಯಕರ ಮೌನ ಹಿಂದುಳಿದವರ ಬಗ್ಗೆ ಹಾಗೂ ನಾರಾಯಣ ಗುರುಗಳ ಬಗ್ಗೆ ಅವರಿಗಿರುವ ಕಾಳಜಿಯನ್ನು ಅನುಮಾನದಿಂದ ನೋಡುವಂತಾಗಿದೆ ಎಂದಿದ್ದಾರೆ. ಬಿಜೆಪಿ ಸರಕಾರವು ರಾಜ್ಯ ಹಾಗೂ ದೇಶದ ಅಭಿವೃದ್ಧಿಯನ್ನು ಕಡೆಗಣಿಸಿ, ವಿರೋಧ ಪಕ್ಷದವರ ವಾಕ್ ಸ್ವಾತಂತ್ರ್ಯವನ್ನು ದಮನ ಮಾಡುತ್ತಿದೆ. ವಿರೋಧ ಪಕ್ಷದವರ ಮೇಲೆ ಸುಳ್ಳು ಸುಳ್ಳು ಕೇಸುಗಳನ್ನು ದಾಖಲಿಸುವುದರ ಮೂಲಕ ಜವಾಬ್ದಾರಿಯುತವಾಗಿ ಕೆಲಸ ಮಾಡುವ ವಿರೋಧ ಪಕ್ಷವನ್ನು ಬೆದರಿಸುತ್ತಿದೆ.ಕೋವಿಡ್ ನಿಯಮಾವಳಿಯನ್ನು ದುರುದ್ದೇಶಕ್ಕಾಗಿ ಉಪಯೋಗಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸನ್ನು ದಾಖಲಿಸುವುದರ ಜೊತೆಗೆ, ಕೋವಿಡ್ ನಿಯಮಾವಳಿಗಳು ಇದ್ದರು ಬಿಜೆಪಿಯ ಕಾರ್ಯಕ್ರಮಕ್ಕೆ ಯಾವುದೇ ಕೇಸ್ ನಿರ್ಬಂಧನೆ ಇಲ್ಲವಾಗಿದೆ,ಸಮಾಜದ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ಸಮಾಜ ಕಲ್ಯಾಣ ಸಚಿವರ ಕ್ಷೇತ್ರದಲ್ಲಿ ಕೋಟದ ಕೊರಗ ಸಮಾಜದ ಮೇಲೆ ನಡೆದ ಘಟನೆ ಮತ್ತು ಇತ್ತೀಚಿಗೆ ನಡೆದ ಅವಳಿ ಕೊಲೆ ದೊಡ್ಡ ಸಾಕ್ಷಿ ಎಂದರು.

ಇತ್ತೀಚಿಗೆ ಬಿಜೆಪಿ ಕಾರ್ಯಕರ್ತರಿಂದಲೇ ಯಡಮೊಗ್ಗೆ ಉದಯ ಗಾಣಿಗರ ಕೊಲೆ ಮತ್ತು ಕೆಂಜೂರು ಪ್ರವೀಣ್ ಪೂಜಾರಿ ಕೊಲೆ ಎಲ್ಲವೂ ಹಿಂದುಳಿದ ವರ್ಗದವರ ಮೇಲೆ ನಡೆದ ದೌರ್ಜನ್ಯವಾಗಿದೆ,ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯನ್ನು ಭಕ್ತಿಯಿಂದ ಆರಾಧನೆ ಮಾಡುವ ಬಹುಸಂಖ್ಯೆಯ ಹಿಂದುಳಿದ ವರ್ಗದವರ ಮನಸಿನ ಭಾವನೆಗೆ ಧಕ್ಕೆಯಾಗಿದೆ ಇದೊಂದು ಗಂಭೀರ ವಿಷಯವಾಗಿದ್ದು ಸರಕಾರವು ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ಮಾಡಿಕೊಡುವುದರ ಮೂಲಕ ಅವರಿಗೆ ಗೌರವ ಸಲ್ಲಿಸಬೇಕೆಂದು ಸೊರಕೆ ಆಗ್ರಹಿಸಿದ್ದಾರೆ.