ಉದ್ಯಾವರದ ಸುರೇಶ್ ಬಂಗೇರ ಶಬರಿಮಲೆಯಲ್ಲಿ ಹೃದಯಘಾತದಿಂದ ಸಾವು
Posted On:
16-01-2022 07:35PM
ಉಡುಪಿ : ಜಿಲ್ಲೆಯ ಉದ್ಯಾವರ ಅಯ್ಯಪ್ಪಸ್ವಾಮಿ ಮಂದಿರದಿಂದ ಹೊರಟ ಅಯ್ಯಪ್ಪಸ್ವಾಮಿ ಸುರೇಶ್ ಬಂಗೇರ ( 52) ಶಬರಿಮಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಉದ್ಯಾವರ ಅಯ್ಯಪ್ಪ ಮಂದಿರದಿಂದ ಮಹಾಪೂಜೆ ಮಾಡಿ ಇರುಮುಡಿ ಕಟ್ಟಿ ನಿನ್ನೆ ರೈಲು ಮುಖಾಂತರ 32 ಸ್ವಾಮಿಗಳ ಜೊತೆ ಹೊರಟಿದ್ದರು. ಶಬರಿಮಲೆಯ ಗಣೇಶ ಬೆಟ್ಟ ಹತ್ತುವ ವೇಳೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ.
ಮೃತದೇಹ ಪಂಪೆಯಲ್ಲಿ ಚಿಕಿತ್ಸಾ ಕೇಂದ್ರದಲ್ಲಿದ್ದು, ನಾಳೆ ಅವರ ಮೃತದೇಹ ಉದ್ಯಾವರ ಅವರ ನಿವಾಸಕ್ಕೆ ಬರಲಿದೆ.
ಉದ್ಯಾವರ ಸಂಪಿಗೆ ನಗರದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.