ಹೆಜಮಾಡಿ : ಇತ್ತೀಚಿಗೆ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿ ಸಮೀಪ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹೆಜಮಾಡಿ ಕೋಡಿ ನಿವಾಸಿ ಭಾಸ್ಕರ್ ಪುತ್ರನ್ ರವರ ಪುತ್ರ ಜಯಂತ್ ರವರು ನೀರು ಪಾಲಾಗಿ ಮೃತರಾಗಿದ್ದರು.
ವಿಷಯ ತಿಳಿದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಮೃತರ ನಿವಾಸಕ್ಕೆ ತೆರಳಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದರು. ಆ ನಿಟ್ಟಿನಲ್ಲಿ ಕುಟುಂಬ ವರ್ಗಕ್ಕೆ ತನ್ನ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯಿಂದ ಸುಮಾರು 6 ಲಕ್ಷ ರೂಗಳನ್ನು ಮಂಜೂರು ಮಾಡಿ ಸ್ವತಃ ತಾನೇ ಮೃತರ ನಿವಾಸಕ್ಕೆ ತೆರಳಿ ಮಂಜೂರಾತಿ ಪತ್ರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ಸುವರ್ಣ, ಜನಾರ್ಧನ ಕೋಟ್ಯಾನ್, ಬಬಿತ, ರೋಷನ್ ಕಾಂಚನ್, ಸರಿನಾ, ಶರಣ್ ಮಟ್ಟು, ಸುಜಾತಾ, ನಳಿನಿ ಹಾಗೂ ಸ್ಥಳೀಯ ಪಕ್ಷದ ಪ್ರಮುಖರು ಸುಧಾಕರ್ ಕರ್ಕೇರ, ಹಿರಿಯರಾದ ಧನಂಜಯ ಗುರಿಕಾರ, ನಿತಿನ್ ಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.