ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಪ್ರಥಮ ಹಂತದಲ್ಲಿ 10 ಲಕ್ಷ, ದ್ವಿತೀಯ ಹಂತದಲ್ಲಿ 15 ಲಕ್ಷ ಒಟ್ಟು 25ಲಕ್ಷ ಮಂಜೂರು ಮಾಡಿದ್ದಾರೆ.
ಮಂಜೂರಾದ ಸಹಾಯಧನದ ಚೆಕ್ ನ್ನು ಧರ್ಮಾಧಿಕಾರಿಗಳ ಸಂಬಂಧಿ, ಪಡುಬಿದ್ರಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ರತ್ನಾಕರ ರಾಜ್ ಬಲ್ಲಾಳ್ ರವರ ಉಪಸ್ಥಿತಿಯಲ್ಲಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ವಸಂತ್ ಸಾಲ್ಯಾನ್, ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕರಾದ ಗಣೇಶ್ ಬಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಉದ್ಯಮಿ ದಯಾನಂದ ಹೆಜಮಾಡಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಿನರಾಜ್, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧಾಕರ್ ಕರ್ಕೆರ, ಉಡುಪಿ ತಾಲೂಕಿನ ಯೋಜನಾಧಿಕಾರಿಯವರಾದ ರಾಮ ಎಂ, ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಗಣ್ಯರ ಮತ್ತು ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.