ಮಂಗಳೂರು : ಇಲ್ಲಿನ ಉತ್ತರ ಪೊಲೀಸ್ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡೆ, ಹೈಸ್ಕೂಲು ಬಳಿ ನಿವಾಸಿ ಸಿ.ಎ.ಅಬ್ಬಾಸ್ ಪುತ್ರನಾದ ಆರೋಪಿ ಝಕಾರಿಯಾ ಎಂಬಾತನನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸು ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಇವರ ಮಾರ್ಗದರ್ಶನದಂತೆ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಓಂದಾಸ್, ಪೊಲೀಸ್ ಕಾನ್ಸ್ಟೇಬಲ್ ಸಂಪತ್ ಇವರೊಂದಿಗೆ ಜನವರಿ 18ರಂದು ವಶಕ್ಕೆ ಪಡೆದಿರುತ್ತಾರೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೋಲಿಸರಿಗೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.